Asianet Suvarna News Asianet Suvarna News

ಹವಾಲಾ ಪ್ರಕರಣ: ಸಚಿವ ಡಿಕೆಶಿಗೆ ಜಾಮೀನು

ಆದಾಯ ತೆರಿಗೆ ಇಲಾಖೆ ದಾಖಲಿಸಿರುವ ಹವಾಲಾ ಪ್ರಕರಣದಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಐವರು ಆರೋಪಿಗಳಿಗೂ ಆರ್ಥಿಕ ಅಪರಾಧಗಳ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. 

ಆದಾಯ ತೆರಿಗೆ ಇಲಾಖೆ ದಾಖಲಿಸಿರುವ ಹವಾಲಾ ಪ್ರಕರಣದಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಐವರು ಆರೋಪಿಗಳಿಗೂ ಆರ್ಥಿಕ ಅಪರಾಧಗಳ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.  ಗುರುವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಐವರು ಆರೋಪಿಗಳಿಗೂ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.  ಡಿಕೆಶಿ ಸೇರಿ ಐದು ಆರೋಪಿಗಳಿಗೆ ಖುದ್ದು ಹಾಜರಾಗಲು ಕೋರ್ಟ್ ಈ ಹಿಂದೆ ಸೂಚಿಸಿತ್ತು.  ಪ್ರಕರಣದ ವಿಚಾರಣೆಯನ್ನು  ಸೆಪ್ಟೆಂಬರ್ 20ಕ್ಕೆ ಮುಂದೂಡಿರುವ ಆರ್ಥಿಕ ಅಪರಾಧ ಕೋರ್ಟ್, ಆರೋಪಿಗಳಿಗೆ ತಲಾ 50 ಸಾವಿರ ಮೌಲ್ಯದ ಬಾಂಡ್ ಶ್ಯೂರಿಟಿ ಸಲ್ಲಿಸುವಂತೆ ಸೂಚನೆ ನೀಡಿದೆ.

Video Top Stories