ಮತ್ತೆ ಬಂಧನದ ಭೀತಿಯಲ್ಲಿ ಡಿ.ಕೆ.ಶಿವಕುಮಾರ್
ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅದ್ಯಾಕೋ ಟೈಮ್ ಸರಿ ಇಲ್ಲ ಅಂತ ಕಾಣಿಸುತ್ತೇ. ಒಂದಲ್ಲಾ ಒಂದು ಸಂಕಷ್ಟಗಳನ್ನು ಎದುರಿಸುತ್ತಿರುವ ಡಿ.ಕೆ.ಶಿವಕುಮಾರ್ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.
ಬೆಂಗಳೂರು, (ಸೆ.18): ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅದ್ಯಾಕೋ ಟೈಮ್ ಸರಿ ಇಲ್ಲ ಅಂತ ಕಾಣಿಸುತ್ತೇ. ಒಂದಲ್ಲಾ ಒಂದು ಸಂಕಷ್ಟಗಳನ್ನು ಎದುರಿಸುತ್ತಿರುವ ಡಿ.ಕೆ.ಶಿವಕುಮಾರ್ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.
ಮೊನ್ನೆ ಅಷ್ಟೇ ಆದಾಯ ತೆರಿಗೆ ಇಲಾಖೆಯಿಂದ ದಾಖಲಾದ ಪ್ರಕರಣಗಳಲ್ಲಿ ಡಿ.ಕೆ.ಶಿವಕುಮಾರ್ ಜಾಮೀನು ಪಡೆದು ನಿಟ್ಟುಸಿರು ಬಿಟ್ಟಿದ್ದರು. ಆದರೆ, ಇದೀಗ ಡಿಕೆಶಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಎಫ್ಐಆರ್ ದಾಖಲಿಸಿದೆ.
ಇದನ್ನು ಓದಿ: ಡಿ.ಕೆ. ಶಿವಕುಮಾರ್ಗೆ ಬಿಗ್ ರಿಲೀಫ್, ಬಂಧನ ಭೀತಿಯಿಂದ ಬಚಾವ್
ಅಕ್ರಮ ಆದಾಯ ಗಳಿಕೆ ಆರೋಪದಡಿ ಜಾರಿ ನಿರ್ದೇಶನಾಲಯ ಎಫ್ಐಆರ್ ದಾಖಲಿಸಿದೆ. ದೆಹಲಿಯ ಫ್ಲಾಟ್ನಲ್ಲಿ ಸಿಕ್ಕಿದ್ದ 8.59 ಕೋಟಿ ರೂಪಾಯಿಗಳ ಪ್ರಕರಣದಲ್ಲಿ ಎಫ್ಐಆರ್ ದಾಖಲು ಮಾಡಿದೆ. ಈ ಮೂಲಕ ಸಚಿವ ಡಿ.ಕೆ.ಶಿವಕುಮಾರ್ಗೆ ಬಂಧನದ ಭೀತಿ ಎದುರಾಗಿದೆ.
ಡಿಕೆಶಿಯನ್ನು ವಿಚಾರಣೆಗೆಂದು ದೆಹಲಿಗೆ ಕರೆದು ಅಲ್ಲೇ ಬಂಧಿಸುವ ಸಾಧ್ಯತೆ. ಒಂದು ವೇಳೆ ಡಿ.ಕೆ. ಶಿವಕುಮಾರ್ ಬಂಧನವಾದರೆ, ಸಮ್ಮಿಶ್ರ ಸರ್ಕಾರಕ್ಕೂ ಕಂಟಕ ಎದುರಾಗುವ ಸಾಧ್ಯತೆ ಇದೆ.