ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿಯಲ್ಲಿ  ನಾಗಮಂಗಲದಲ್ಲಿ ಕುಮಾರ ಪರ್ವ ಕಾರ್ಯಕ್ರಮಕ್ಕೆ ಬಳಸಿದ್ದ ಜೆಸಿಬಿ ಹಾಗೂ ಕ್ರೇನ್’ನ್ನು ವಶಕ್ಕೆ ಪಡೆಯಲಾಗಿದೆ. 11 ಜೆಸಿಬಿ ಹಾಗೂ 1 ಕ್ರೇನ್’ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನಾಗಮಂಗಲ :  ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿಯಲ್ಲಿ ನಾಗಮಂಗಲದಲ್ಲಿ ಕುಮಾರ ಪರ್ವ ಕಾರ್ಯಕ್ರಮಕ್ಕೆ ಬಳಸಿದ್ದ ಜೆಸಿಬಿ ಹಾಗೂ ಕ್ರೇನ್’ನ್ನು ವಶಕ್ಕೆ ಪಡೆಯಲಾಗಿದೆ. 11 ಜೆಸಿಬಿ ಹಾಗೂ 1 ಕ್ರೇನ್’ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಾ.30ರಂದು ನಾಗಮಂಗಲದಲ್ಲಿ ಕುಮಾರ ಪರ್ವ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಸ್ವಾಗತಿಸಿಲು ಜೆಸಿಬಿಗಳಲ್ಲಿ ಕುಳಿತು ಕಾರ್ಯಕರ್ತರು ಆಗಮಿಸಿದ್ದರು.

ಕ್ರೇನ್ ಬಳಸಿ ಕುಮಾರಸ್ವಾಮಿಗೆ ಬೃಹತ್ ಸೇಬಿನ ಹಾರವನ್ನು ಹಾಕಿದ್ದರು. ಅನುಮತಿ ಪಡೆಯದೇ ಕ್ರೇನ್ ಹಾಗೂ ಜೆಸಿಬಿ ಬಳಸಿದ ಜೆಡಿಎಸ್ ಮುಖಂಡರು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.