ಕೇಂದ್ರ ಚುನಾವಣಾ ಆಯೋಗವು ಇಂದು ಕರ್ನಾಟಕದ ಎರಡು ವಿಧಾನಸಭಾ ಉಪಚುನಾವಣೆಗೂ ದಿನಾಂಕ ಘೋಷಿಸಿದೆ. 

ಬೆಂಗಳೂರು, (ಅ.6): ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ಇಂದು(ಅ.06) ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ. 

Add Asianetnews Kannada as a Preferred SourcegooglePreferred

ಇದರಲ್ಲಿ ಕರ್ನಾಟಕದ ಎರಡು ವಿಧಾನಸಭಾ ಉಪಚುನಾವಣೆಗೂ ದಿನಾಂಕ ಘೋಷಿಸಲಾಗಿದ್ದು, ರಾಮನಗರ ಹಾಗೂ ಜಮಖಂಡಿ ವಿಧಾನಸಭೆ ಉಪಚುನಾವಣೆ ನವೆಂಬರ್ 3ರಂದು ಚುನಾವಣೆ ನಡೆಯಲಿದೆ.

ರಾಮನಗರ ಉಪಚುನಾವಣೆ: ಬಿಜೆಪಿಯಿಂದ ಮಾಜಿ‌ ಸಿಎಂ ಪುತ್ರಿ ಕಣಕ್ಕೆ..?

ಇನ್ನು ಇದರ ಫಲಿತಾಂಶ ನವೆಂಬರ್ 6ಕ್ಕೆ ಹೊರಬೀಳಲಿದೆ. ಇಂದಿನಿಂದಲೇ ನೀತಿ ಸಂಹಿತಿ ಜಾರಿಗೆ ಬರಲಿದೆ ಎಂದು ಕೇಂದ್ರ ಚುನಾವಣೆ ಆಯೋಗ ತಿಳಿಸಿದೆ.

ಸಿಎಂ ಕುಮಾರಸ್ವಾಮಿ ಅವರು ಚನ್ನಪಟ್ಟಣ ಹಾಗೂ ರಾಮನಗರ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಎರಡೂ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಆದರೆ, ಕುಮಾರಸ್ವಾಮಿ ಅವರು ಚನ್ನಪಟ್ಟಣವನ್ನು ಇಟ್ಟುಕೊಂಡು ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು.

ಇದ್ರಿಂದ ರಾಮನಗರಕ್ಕೆ ನವೆಂಬರ್ 3 ರಂದು ಚುನಾವಣೆ ನಡೆಯಲಿದೆ. ಇನ್ನು ಕಾಂಗ್ರೆಸ್ ನ ಸಿದ್ದು ನ್ಯಾಮೇಗೌಡ ಅವರ ಅಕಾಲಿಕ ಮರಣದಿಂದ ಜಮಖಂಡಿ ವಿಧಾಸಭೆ ತೆರವಾಗುತ್ತು. ಹಿನ್ನೆಲೆಯಲ್ಲಿ ನವೆಂಬರ್ 3ರಂದು ಉಪಚುನಾವಣೆ ನಡೆಯಲಿದೆ.