ಮತದಾನ ಜಾಗೃತಿ ಮೂಡಿಸುವ ಅವಸರದಲ್ಲಿ ಜಿಲ್ಲಾ ಚುನಾವಣಾ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ. 

ಚಾಮರಾಜನಗರ (ಏ. 08): ಮತದಾನ ಜಾಗೃತಿ ಮೂಡಿಸುವ ಅವಸರದಲ್ಲಿ ಜಿಲ್ಲಾ ಚುನಾವಣಾ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ. 

Add Asianetnews Kannada as a Preferred SourcegooglePreferred

ಮತದಾನ ಜಾಗೃತಿ ಮೂಡಿಸವ ಅವಸರದಲ್ಲಿ ಕಳೆದ ಲೋಕಸಭಾ ಚುನಾವಣೆಯ ಪೋಸ್ಟರನ್ನು ಅಧಿಕಾರಿಗಳು ಅಂಟಿಸಿದ್ದಾರೆ. 2014 ರಲ್ಲಿ ಲೋಕಸಭಾ ಚುನಾವಣೆಯ ಅಂಬಾಸಿಡರ್ ಆಗಿದ್ದ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಫೋಟೋ ಇರುವ ಫ್ಲೆಕ್ಸನ್ನು ಅಳವಡಿಕೆ ಮಾಡಿದ್ದಾರೆ. ಈ ಬಾರಿ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಚುನಾವಣಾ ಅಂಬಾಸಿಡರ್ ಆಗಿದ್ದಾರೆ. ರಾಹುಲ್ ದ್ರಾವಿಡ್ ಬದಲು ಅಬ್ದುಲ್ ಕಲಾಂ ಫೋಟೋ ಹಾಕಿದ್ದಾರೆ. 

ಚಾಮರಾಜನಗರ ಪಟ್ಟಣದ ಹೃದಯ ಭಾಗವಾದ ಭುವನೇಶ್ವರಿ ವೃತ್ತದಲ್ಲಿ ಪೋಸ್ಟರ್ ಅಳವಡಿಕೆ ಮಾಡಿದ್ದಾರೆ.