ಬಿಟಿಪಿಎಸ್ ಮತ್ತು ಆರ್‌ಟಿಪಿಎಸ್ ಘಟಕಗಳಲ್ಲಿ ತಾಂತ್ರಿಕ ಕಾರಣದಿಂದ ಒಂದೊಂದು ಘಟಕ ಸ್ಥಗಿತಗೊಂಡ ಕಾರಣ 1500 ಮೆಗಾವ್ಯಾಟ್ ವಿದ್ಯುತ್ ಕೊರತೆ ಉಂಟಾಗಿದೆ.

ರಾಜ್ಯದ ರಾಯಚೂರು ಮತ್ತು ಬಳ್ಳಾರಿ ಶಾಖೋತ್ಪನ್ನ ಕೇಂದ್ರಗಳ ತಲಾ ಒಂದು ವಿದ್ಯುತ್ ಉತ್ಪಾದನಾ ಘಟಕಗಳು ಹಠಾತ್ ಸ್ಥಗಿತಗೊಂಡ ಕಾರಣ ಬೆಂಗಳೂರು ನಗರ ಸೇರಿದಂತೆ ಬೆಸ್ಕಾಂ ವ್ಯಾಪ್ತಿಯಲ್ಲಿ ಮಂಗಳವಾರದಿಂದ ಹಠಾತ್ ವಿದ್ಯುತ್ ವ್ಯತ್ಯಯ ಉಂಟಾಗಿ ಜನರು ಕಿರಿಕಿರಿ ಅನುಭವಿಸುವಂತಾಯಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಿಟಿಪಿಎಸ್ ಮತ್ತು ಆರ್‌ಟಿಪಿಎಸ್ ಘಟಕಗಳಲ್ಲಿ ತಾಂತ್ರಿಕ ಕಾರಣದಿಂದ ಒಂದೊಂದು ಘಟಕ ಸ್ಥಗಿತಗೊಂಡ ಕಾರಣ 1500 ಮೆಗಾವ್ಯಾಟ್ ವಿದ್ಯುತ್ ಕೊರತೆ ಉಂಟಾಗಿದೆ. ಕೊರತೆ ಸರಿದೂಗಿಸಲು ಕೇಂದ್ರ ಗ್ರಿಡ್‌ನಿಂದ ಬುಧವಾರದಿಂದಲೇ ವಿದ್ಯುತ್ ಖರೀದಿ ಮಾಡಲಾಗುವುದು. ಆದಾಗ್ಯೂ ಇನ್ನು ಮುಂದೆಯೂ ವ್ಯತ್ಯಯ ಉಂಟಾದಲ್ಲಿ ನಾಗರಿಕರು ಸಹಕರಿಸುವಂತೆ ಬೆಸ್ಕಾಂ

ಕೋರಿದೆ. ರಾಜ್ಯದ ಎರಡು ಪ್ರಮುಖ ವಿದ್ಯುತ್ ಘಟಕಗಳು ಸ್ಥಗಿತಗೊಂಡಿದ್ದರಿಂದ ಎಸ್ಕಾಂಗಳಲ್ಲಿ ಹಠಾತ್ ವಿದ್ಯುತ್ ಸ್ಥಗಿತಗೊಳಿಸಲಾಗಿತ್ತು.