ಇನ್ನೊಂದೆಡೆ ತಮಿಳುನಾಡಿನಾದ್ಯಂತ ಹೈ ಅಲರ್ಟ್ ಮುಂದುವರೆದಿದೆಮ ನಿಷೇಧಾಜ್ಞೆಯ ಹೊರತೂ, ಜನರು ಆಸ್ಪತ್ರೆಯ ಹೊರಗೆ ಅಪಾರ ಸಂಖ್ಯೆಯಲ್ಲಿ ಜಮಾಯಿಸುತ್ತಿದ್ದಾರೆ.

ಚೆನ್ನೈ: ಜಯಾಗೆ ಹೃದಾಯಾಘಾತವಾಗಿರುವ ಹಿನ್ನೆಲೆಯಲ್ಲಿ ರಾಜ್ಯಪಾಲ ವಿದ್ಯಾಸಾಗರ ರಾವ್, ಹಂಗಾಮಿ ಸಿಎಂ ಪನೀರ್'ಸೆಲ್ವಂ ನೇತೃತ್ವದಲ್ಲಿ ಅಪೊಲೋ ಆಸ್ಪತ್ರೆಯಲ್ಲೇ ತುರ್ತು ಸಚಿವ ಸಂಪುಟ ಆರಂಭವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಯಾ ಬಗ್ಗೆ ಆಸ್ಪತ್ರೆ ವೈದ್ಯರಿಂದ ಸ್ಪಷ್ಟ ಮಾಹಿತಿ ರಾಜ್ಯಪಾಲರು ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಆ ಹಿನ್ನೆಲೆಯಲ್ಲಿ ಮುಂದಿನ ಕ್ರಮದ ಬಗ್ಗೆ ಚರ್ಚಿಸಲು ತುರ್ತು ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ.

ಇನ್ನೊಂದೆಡೆ ತಮಿಳುನಾಡಿನಾದ್ಯಂತ ಹೈ ಅಲರ್ಟ್ ಮುಂದುವರೆದಿದೆಮ ನಿಷೇಧಾಜ್ಞೆಯ ಹೊರತೂ, ಜನರು ಆಸ್ಪತ್ರೆಯ ಹೊರಗೆ ಅಪಾರ ಸಂಖ್ಯೆಯಲ್ಲಿ ಜಮಾಯಿಸುತ್ತಿದ್ದಾರೆ. ದೇಶದ ವಿವಿಧ ಭಾಗಗಳಲ್ಲಿ 9 ಅರೆಸೇನಾ ತುಕಡಿಗಳನ್ನು ಸನ್ನದ್ಧಗೊಳಿಸಲಾಗಿದೆ. ಅಗತ್ಯ ಬಿದ್ದರೆ ವಿಮಾನದ ಮೂಲಕ ಅವುಗಳನ್ನು ರವಾನಿಸುವ ಯೋಜನೆ ಇದೆ.

ಕರ್ನಾಟಕ ರಾಜ್ಯದಿಂದ ತಮಿಳುನಾಡಿಗೆ ಹೋಗುವ ಎಲ್ಲಾ ಕೆಎಸ್’ಆರ್’ಟಿಸಿ ಬಸ್ಸು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.