ಅರಣ್ಯದಲ್ಲಿ ವನ್ಯಜೀವಿ ಪರಿಪಾಲಕರಿಂದಲೇ ಮೋಜು ಮಸ್ತಿ ಮಾಡಿ ಪರಿಸರ ಮಾಲಿನ್ಯ ಮಾಡುತ್ತಿರುವ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಒಂದು ಘಟನೆ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯದ ಮುತ್ತೋಡಿ ವಲಯದಲ್ಲಿ ನಡೆದಿದೆ.

ಚಿಕ್ಕಮಗಳೂರು(ಅ.28): ಅರಣ್ಯದಲ್ಲಿ ವನ್ಯಜೀವಿ ಪರಿಪಾಲಕರಿಂದಲೇ ಮೋಜು ಮಸ್ತಿ ಮಾಡಿ ಪರಿಸರ ಮಾಲಿನ್ಯ ಮಾಡುತ್ತಿರುವ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಒಂದು ಘಟನೆ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯದ ಮುತ್ತೋಡಿ ವಲಯದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವನ್ಯಜೀವಿ ಪರಿಪಾಲಕ ಸತೀಶ್ ಗೌಡ ಮತ್ತು ಅವರ ಸ್ನೇಹಿತರ ತಂಡ ಇತ್ತೀಚೆಗೆ ಮುತ್ತೋಡಿ ಪ್ರಕೃತಿ ಶಿಬಿರದ ಹೃದಯಭಾಗದಲ್ಲಿ ನ ಅಭಯಾರಣ್ಯದ ಸೋಮವಾಹಿನಿ ನದಿಯಲ್ಲಿ ಅಕ್ರಮವಾಗಿ ಪಾರ್ಟಿ ಮಾಡಿ ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ.
ಇನ್ನೂ ಕೈಯಲ್ಲಿ ಹೆಂಡದ ಬಾಟಲಿಗಳನ್ನು ಹಿಡಿದು ಕುಡಿಯುತ್ತ, ಕುಣಿಯುತ್ತ, ನದಿಯಲ್ಲಿ ಕುರ್ಚಿ, ಮೇಜುಗಳನ್ನು ಹಾಕಿಕೊಂಡು ಕುಳಿತು ನಿರಾತಂಕವಾಗಿ ಮದ್ಯ ಸೇವಿಸುತ್ತಿರುವ ಪೋಟೋಗಳು ಸಾಮಾಜಿಕ ಜಾಲ ತಾಣದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು , ಈ ಬಗ್ಗೆ ಅರಣ್ಯಾಧಿಕಾರಿಗಳು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.