ಸಿದ್ದರಾಮಯ್ಯನವರು ಐದು ವರ್ಷದಲ್ಲಿ ಎಷ್ಟು ಬಾರಿ ಕಾಗಿನೆಲೆಗೆ ಭೇಟಿ ನೀಡಿದ್ದಾರೆ.  ನಂದಗಡಕ್ಕೆ , ಸಂಗೊಳ್ಳಿ  ರಾಯಣ್ಣನ  ಪುಣ್ಯ ಭೂಮಿಗೆ  ಒಮ್ಮೆಯೂ ಸಿದ್ದರಾಮಯ್ಯ ಹೋಗಿಲ್ಲ.  ಹಿಂದುಳಿದವರ ಹೆಸರು ಹೇಳಿ ಮುಖ್ಯಮಂತ್ರಿ ಆದ್ರು.  ಮುಖ್ಯಮಂತ್ರಿ  ಆಗುತ್ತಿದ್ದಂತೆ ಎಲ್ಲರನ್ನೂ ಮರೆತರು ಎಂದು ಸಿಎಂ ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದಿದ್ದಾರೆ. 

ಬೆಂಗಳೂರು (ಏ. 03): ಸಿದ್ದರಾಮಯ್ಯನವರು ಐದು ವರ್ಷದಲ್ಲಿ ಎಷ್ಟು ಬಾರಿ ಕಾಗಿನೆಲೆಗೆ ಭೇಟಿ ನೀಡಿದ್ದಾರೆ. ನಂದಗಡಕ್ಕೆ , ಸಂಗೊಳ್ಳಿ ರಾಯಣ್ಣನ ಪುಣ್ಯ ಭೂಮಿಗೆ ಒಮ್ಮೆಯೂ ಸಿದ್ದರಾಮಯ್ಯ ಹೋಗಿಲ್ಲ. ಹಿಂದುಳಿದವರ ಹೆಸರು ಹೇಳಿ ಮುಖ್ಯಮಂತ್ರಿ ಆದ್ರು. ಮುಖ್ಯಮಂತ್ರಿ ಆಗುತ್ತಿದ್ದಂತೆ ಎಲ್ಲರನ್ನೂ ಮರೆತರು ಎಂದು ಸಿಎಂ ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿದ್ದರಾಮಯ್ಯ ಇದು ನನ್ನ ಕೊನೆ ಚುನಾವಣೆ ಎಂದಿದ್ದರು. ಹೌದು ಸಿದ್ದರಾಮಯ್ಯಗೆ ಇದು ಕೊನೇ ಚುನಾವಣೆ. ಹೈಕಮಾಂಡ್ ಹೇಳದಿದ್ರು, ನಾನೆ ಮತ್ತೆ ಮುಖ್ಯಮಂತ್ರಿ ಅಂತಾರೆ ಸಿದ್ದರಾಮಯ್ಯ. ಸಿದ್ದರಾಮಯ್ಯ ನೀವು ಮೊದಲು ಗೆದ್ದು ಎಂಎಲ್ ಎ ಆಗಿ ಸಾಕು ನೋಡೊಣ. ಚಾಮುಂಡೇಶ್ವರಿ ಕ್ಷೇತ್ರದಿಂದ ಮೊದಲು ಗೆದ್ದು ಬನ್ನಿ ಸಿದ್ದರಾಮಯ್ಯನವರೇ ಎಂದು ಈಶ್ವರಪ್ಪ ಸವಾಲು ಎಸೆದಿದ್ದಾರೆ. 

ಹಾವೇರಿಯ ಕಾಗಿನೆಲೆಯಲ್ಲಿ ನಡೆಯುತ್ತಿರೋ ಸಮಾವೇಶದಲ್ಲಿ ಈಶ್ವರಪ್ಪ ಮಾತನಾಡುತ್ತಾ, ಕನಕದಾಸರನ್ನು ಸ್ಮರಿಸಿದ್ದಾರೆ. ಸಂಗೊಳ್ಳಿ ರಾಯಣ್ಣ, ಕನಕದಾಸರ ನೆನಪು ಸಿದ್ದರಾಮಯ್ಯನವರಿಗೆ ಈಗ ಬಂದಿದೆ.. ಚುನಾವಣೆ ಸಂದರ್ಭದಲ್ಲಿ ಈಗ ಅವರೆಲ್ಲರ ನೆನನಪಾಗುತ್ತಿದೆ. ಇದು ಸಿದ್ದರಾಮಯ್ಯನವರ ಕೊನೆ ಚುನಾವಣೆ. ರಾಜ್ಯದಲ್ಲಿ ಕಾಂಗ್ರೆಸ್ ಔಟ್ ಬಿಜೆಪಿ ಇನ್ ಆಗುತ್ತೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.