Asianet Suvarna News Asianet Suvarna News

ಸಂತೋಷ್ ವಿಚಾರ: ಕಾರ್ಯಕಾರಿಣಿಗೆ ಈಶ್ವರಪ್ಪ ಗೈರು?

ಸಂಘದ ಪ್ರಚಾರಕರಾಗಿರುವ ಅವರ ಹೆಸರನ್ನು ಪ್ರಸ್ತಾಪಿಸಿ ಯಡಿಯೂರಪ್ಪ ಅವರು ಆಪಾದನೆ ಮಾಡಿದ್ದು ತಪ್ಪು. ಜತೆಗೆ ಸಂಘ ಮೂಲದ ಭಾನು​ಪ್ರಕಾಶ್‌ ಮತ್ತು ನಿರ್ಮಲಕುಮಾರ್‌ ಸುರಾನಾ ಅವರನ್ನು ಪಕ್ಷದ ಉಪಾಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿದ್ದು ಸರಿಯಲ್ಲ ಎನ್ನುತ್ತಿರುವ ಈಶ್ವರಪ್ಪ ಅವರು ಈ ಮೂಲಕ ಸಂಘ ಪರಿವಾರದ ಮುಖಂಡರು ಹಾಗೂ ಕಾರ್ಯಕರ್ತರ ಒಲವು ಗಳಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆ.

Eshwarappa may skip party executive meet

ಬೆಂಗಳೂರು (ಮೇ.04): ಪಕ್ಷದ ರಾಷ್ಟ್ರೀಯ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್‌ ವಿರುದ್ಧ ಯಡಿ​ಯೂ​ರಪ್ಪ ಅವರು ಮಾತನಾಡಿರುವುದನ್ನೇ ಮುಂದಿಟ್ಟು​ಕೊಂಡು ಈಶ್ವರಪ್ಪ ಮೈಸೂರಿನ ಕಾರ್ಯ​ಕಾರಿ​ಣಿ ಸಭೆಗೆ ಗೈರುಹಾಜರಾಗುವ ಸಾಧ್ಯತೆಯಿದೆ.

ಸಂಘದ ಪ್ರಚಾರಕರಾಗಿರುವ ಅವರ ಹೆಸರನ್ನು ಪ್ರಸ್ತಾಪಿಸಿ ಯಡಿಯೂರಪ್ಪ ಅವರು ಆಪಾದನೆ ಮಾಡಿದ್ದು ತಪ್ಪು. ಜತೆಗೆ ಸಂಘ ಮೂಲದ ಭಾನು​ಪ್ರಕಾಶ್‌ ಮತ್ತು ನಿರ್ಮಲಕುಮಾರ್‌ ಸುರಾನಾ ಅವರನ್ನು ಪಕ್ಷದ ಉಪಾಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿದ್ದು ಸರಿಯಲ್ಲ ಎನ್ನುತ್ತಿರುವ ಈಶ್ವರಪ್ಪ ಅವರು ಈ ಮೂಲಕ ಸಂಘ ಪರಿವಾರದ ಮುಖಂಡರು ಹಾಗೂ ಕಾರ್ಯಕರ್ತರ ಒಲವು ಗಳಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆ.

ಹೀಗಾಗಿ, ಈ ತಿಂಗಳ 6 ಮತ್ತು 7ರಂದು ಮೈಸೂರಿನಲ್ಲಿ ನಡೆಯುವ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳುವ ಬದಲು ಗೈರಾಗುವುದೇ ಸೂಕ್ತ ಎಂಬ ಚಿಂತನೆಯಲ್ಲಿರುವ ಈಶ್ವರಪ್ಪ, ಇನ್ನೆರಡು ದಿನಗಳಲ್ಲಿ ತಮ್ಮ ಆಪ್ತರೊಂದಿಗೆ ಮಾತುಕತೆ ನಡೆಸಿ ಸ್ಪಷ್ಟತೀರ್ಮಾನ ಕೈಗೊಳ್ಳಲಿದ್ದಾರೆ.

‘ರಾಜಕುಮಾರ' ಸಿನಿಮಾ ನೋಡಿದ ಈಶ್ವರಪ್ಪ!

ಬೆಂಗಳೂರು: ತಮ್ಮ ಮಾತುಗಳಿಂದ ಬಿಜೆಪಿ ಭಿನ್ನಮತದ ಕಾವು ಏರಿಸುತ್ತಿರುವ ಕೆ.ಎಸ್‌.ಈಶ್ವರಪ್ಪ ಅವರು ಬುಧವಾರ ಕನ್ನಡ ಚಲನಚಿತ್ರ ‘ರಾಜಕುಮಾರ' ವೀಕ್ಷಿಸಿದರು. ಸಂಜೆ ಶಿವಮೊಗ್ಗದಿಂದ ಭದ್ರಾವತಿಗೆ ತೆರಳಿ ತಮ್ಮ ಕುಟುಂಬದ ಸದಸ್ಯರೊಂದಿಗೆ ಥೇಟರ್‌ಗೆ ತೆರಳಿ ಆನಂದಿಸಿದರು. ಈ ಚಿತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಮೈಸೂರಿನಲ್ಲಿ ನೋಡಿದ್ದರು. ಮೂರು ದಿನಗಳ ಹಿಂದೆ ಸಿದ್ದು ಒಂದೇ ದಿನದಲ್ಲಿ ‘ಬಾಹುಬಲಿ-2' ಮತ್ತು ಕನ್ನಡ ಚಿತ್ರ ‘ನಿರುತ್ತರ' ವೀಕ್ಷಿಸಿದ್ದರು.

Follow Us:
Download App:
  • android
  • ios