ಬೆಂಗಳೂರು (ಅ.06): ಬಿಜೆಪಿ ನಾಯಕರಾದ ಯಡಿಯೂರಪ್ಪ ಹಾಗೂ ಈಶ್ವರಪ್ಪ ನಡುವಿನ ಮುಸುಕಿನ ಗುದ್ದಾಟ ತಣ್ಣಗಾದಂತೆ ಕಾಣುತ್ತಿದೆ.

ಇವತ್ತು ಬೆಂಗಳೂರಿನ ಡಾಲರ್ಸ್​​ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸಕ್ಕೆ ಕೆ.ಎಸ್​.ಈಶ್ವರಪ್ಪ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಈ ನಾಯಕರ ಜೊತೆ ಬಿಜೆಪಿ ರಾಷ್ಟ್ರೀಯ ಮುಖಂಡ ರಾಮಲಾಲ್ ಕೂಡಾ ಉಪಸ್ಥಿತರಿದ್ದರು.

ಇಂದು ಮಧ್ಯಾಹ್ನ ರಾಜ್ಯ ಬಿಜೆಪಿ ಕೋರ್​ ಕಮಿಟಿ ಸಭೆ ನಡೆಯಲಿದೆ. ಹೀಗಾಗಿ ಕೋರ್​​​ ಕಮಿಟಿಗೂ ಉಭಯ ನಾಯಕರ ಭೇಟಿ ಕುತೂಹಲ ಕೆರಳಿಸಿದೆ.

ನಿವಾಸದಿಂದ ಹೊರಬಂದ ಬಳಿಕ ಮಾತನಾಡಿದ ಈಶ್ವರಪ್ಪ, ಕಾಂಗ್ರೆಸ್ ವಿರುದ್ಧವೇ ನಮ್ಮ ಹೋರಾಟ. ಯಡಿಯೂರಪ್ಪ ನವರೇ ನಮ್ಮ ನಾಯಕರು ಅಂತ ಹೇಳಿದ್ದಾರೆ.