370ನೇ ವಿಧಿ ಶಾಶ್ವತವಾಗಿಡಲು ನೆಹರೂ ಕೂಡಾ ಬಯಸಿರಲಿಲ್ಲ| ಬಿಜೆಪಿ ಪರ ತರೂರ್‌ ಬ್ಯಾಟಿಂಗ್‌

ನವದೆಹಲಿ[ಸೆ.06]: ಜಮ್ಮು-ಕಾಶ್ಮೀರದ ವಿಶೇಷಾಧಿಕಾರ ರದ್ದು ಕುರಿತು ಕಾಂಗ್ರೆಸ್‌ನಲ್ಲಿ ಒಡಕಿನ ಧ್ವನಿ ಮೂಡಿರುವ ಬೆನ್ನಲ್ಲೇ, ಕಾಶ್ಮೀರಕ್ಕೆ 370ನೇ ಸೌಲಭ್ಯವನ್ನು ಶಾಶ್ವತಗೊಳಿಸುವುದು ದೇಶದ ಮೊದಲ ಪ್ರಧಾನಿ ಜವಹರಲಾಲ್‌ ನೆಹರೂ ಕೂಡಾ ಬಯಸಿರಲಿಲ್ಲ ಎಂದು ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಮೂಲಕ 370ನೇ ವಿಧಿ ಹಾಗೂ 35(ಎ) ಪರಿಚ್ಛೇದ ರದ್ದುಗೊಳಿಸಿದ ಬಿಜೆಪಿ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ತಾವೇ ಬರೆದ ‘ದಿ ಹಿಂದು ವೇ’ ಬಿಡುಗಡೆ ಹಿನ್ನೆಲೆಯಲ್ಲಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ತರೂರ್‌, ‘ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವೆಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಈ ರದ್ದುಗೊಳಿಸಿದ ರೀತಿ ಮಾತ್ರ ಸಂವಿಧಾನ ಉಲ್ಲಂಘನೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.