ಕೊಡಗು ಹಾಗೂ ಕೇರಳಕ್ಕೆ ತಲಾ ಒಂದು ತಿಂಗಳ ಸಂಬಳ ನೀಡುತ್ತೇನೆ. ಪ್ರವಾಹ ನಿರಾಶ್ರಿತರಿಗೆ ಆಹಾರ ಸಾಮಗ್ರಿಗಳ ಜತೆಗೆ ಹಣಕಾಸಿನ ನೆರವು ನೀಡಿದರೆ ಅನುಕೂಲವಾಗಲಿದೆ

ಮೈಸೂರು(ಆ.19): ಕೇರಳ ಹಾಗೂ ಕೊಡಗು ನೆರೆ ಸಂತ್ರಸ್ತರಿಗೆ ನನ್ನ 2 ತಿಂಗಳ ಸಂಬಳ ನೀಡುವುದಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ. 

Add Asianetnews Kannada as a Preferred SourcegooglePreferred

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ರಾಜಕೀಯ ಇತಿಹಾಸದಲ್ಲಿ ಇಂತಹ ಮಳೆಯನ್ನು ನೋಡಿಯೇ ಇಲ್ಲ. ಕೇರಳ ಮತ್ತು ಕರ್ನಾಟಕದ ಕೊಡಗು ಜಿಲ್ಲೆಯ ಸಂತ್ರಸ್ತರಿಗೆ ನನ್ನ ಎರಡು ತಿಂಗಳ ಸಂಬಳ ನೀಡುವುದಾಗಿ ತಿಳಿಸಿದರು.

ಕೊಡಗು ಹಾಗೂ ಕೇರಳಕ್ಕೆ ತಲಾ ಒಂದು ತಿಂಗಳ ಸಂಬಳ ನೀಡುತ್ತೇನೆ. ಪ್ರವಾಹ ನಿರಾಶ್ರಿತರಿಗೆ ಆಹಾರ ಸಾಮಗ್ರಿಗಳ ಜತೆಗೆ ಹಣಕಾಸಿನ ನೆರವು ನೀಡಿದರೆ ಅನುಕೂಲವಾಗಲಿದೆ. ಮಳೆಯಿಂದ ತತ್ತರಿಸಿರುವ ಜಿಲ್ಲೆಗೆ ಸಹಾಯ ಮಾಡಲು ಎಲ್ಲರೂ ಮುಂದಾಗಬೇಕು. ರಾಜ್ಯದ ಮುಖ್ಯಮಂತ್ರಿಗಳ ನಿಧಿಗೆ ಧನ ಸಹಾಯ ನೀಡಿ ಎಂದು ಮಾಜಿ ಪ್ರಧಾನಿ ಮನವಿ ಮಾಡಿದ್ದಾರೆ.