ಕಾಂಗ್ರೆಸ್​​​​​​'ನಲ್ಲಿ ಡೈರಿ ಸ್ಫೋಟಗೊಂಡ ಬೆನ್ನಲ್ಲೇ ತೀವ್ರ ಸಂಚಲನ ಸೃಷ್ಟಿಸಿದೆ. ಜೊತೆಗೆ ಕಾಂಗ್ರೆಸ್​​​​​​'ನಲ್ಲೇ ಸಚಿವರ ರಾಜೀನಾಮೆಗೆ ಒತ್ತಡ ಹೆಚ್ಚಾಗುತ್ತಿದೆ. ಇವೆಲ್ಲದರ ನಡುವೆ ಸಿಎಂ ಸಿದ್ದರಾಮಯ್ಯ ಮಾಧ್ಯಮ ಸಲಹೆಗಾರ ದಿನೇಶ್​​ ಅಮಿನ್​​ ಮಟ್ಟು ಫೇಸ್​​ ಬುಕ್​​'ನಲ್ಲಿ ಲೇಖನ ಬರೆದು ಕಾಂಗ್ರೆಸ್'​​​ಗೆ ಮುಜುಗರ ಸೃಷ್ಟಿಸಿದ್ದಾರೆ.

ಬೆಂಗಳೂರು(ಫೆ.26): ಕಾಂಗ್ರೆಸ್​​​​​​'ನಲ್ಲಿ ಡೈರಿ ಸ್ಫೋಟಗೊಂಡ ಬೆನ್ನಲ್ಲೇ ತೀವ್ರ ಸಂಚಲನ ಸೃಷ್ಟಿಸಿದೆ. ಜೊತೆಗೆ ಕಾಂಗ್ರೆಸ್​​​​​​'ನಲ್ಲೇ ಸಚಿವರ ರಾಜೀನಾಮೆಗೆ ಒತ್ತಡ ಹೆಚ್ಚಾಗುತ್ತಿದೆ. ಇವೆಲ್ಲದರ ನಡುವೆ ಸಿಎಂ ಸಿದ್ದರಾಮಯ್ಯ ಮಾಧ್ಯಮ ಸಲಹೆಗಾರ ದಿನೇಶ್​​ ಅಮಿನ್​​ ಮಟ್ಟು ಫೇಸ್​​ ಬುಕ್​​'ನಲ್ಲಿ ಲೇಖನ ಬರೆದು ಕಾಂಗ್ರೆಸ್'​​​ಗೆ ಮುಜುಗರ ಸೃಷ್ಟಿಸಿದ್ದಾರೆ.

Add Asianetnews Kannada as a Preferred SourcegooglePreferred

ಕಳೆದ ಕೆಲವು ವರ್ಷಗಳಿಂದ ಈ ಸಿಕ್ರೇಟ್ ಡೈರಿಗಳ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗುತ್ತಲೇ ಇದೆ. ಜೈನ್ ಹವಾಲಾ ಡೈರಿ, ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಯು.ವಿ.ಸಿಂಗ್ ನೀಡಿದ ತನಿಖಾ ವರದಿಯಲ್ಲಿನ ಖಾರದಪುಡಿ ಮಹೇಶ್ ಡೈರಿ, ಇತ್ತೀಚೆಗೆ ಸಹರಾ ಮತ್ತು ಬಿರ್ಲಾ ಕಂಪೆನಿಗಳ ಕಚೇರಿಯಲ್ಲಿ ಸಿಕ್ಕಿದೆಯೆನ್ನಲಾದ ಡೈರಿ, ಇದೀಗ ಎಂಎಲ್ ಸಿ ಗೋವಿಂದರಾಜ್ ಮನೆಯಲ್ಲಿ ವಶಪಡಿಸಿಕೊಳ್ಳಲಾಗಿದೆಯೆನ್ನಲಾದ ಡೈರಿ ಬಗ್ಗೆ ಚರ್ಚೆಯಾಗುತ್ತಿದೆ. ನೈತಿಕತೆಯ ಆಧಾರದ ಶಿಕ್ಷೆಗೆ ಸಂಬಂಧಿಸಿದಂತೆ ಬಿಜೆಪಿಯ ಹಿರಿಯ ನಾಯಕ ಅಡ್ವಾಣಿ ಪಾಲಿಸಿದ ರಾಜಧರ್ಮದ ಮಾರ್ಗವೊಂದಿದೆ. ಇದು ಸರಿಯಾದ ಮಾರ್ಗ ಎಂದೆನಿಸುತ್ತದೆ. ಅಡ್ವಾಣಿಯವರು ಅದೇ ದಿನ ಸಂಜೆ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಗೋವಿಂದರಾಜ್ ಅವರದ್ದು ಎನ್ನಲಾದ ಡೈರಿಯಲ್ಲಿರುವ ಹೆಸರಿನ ಎಲ್ಲ ರಾಜಕಾರಣಿಗಳು ಕ್ಷಣಮಾತ್ರವೂ ಸಮಯ ವ್ಯರ್ಥಮಾಡದೆ ರಾಜೀನಾಮೆ ಎಸೆದುಬಿಡಬೇಕು ಎಂದು ತಮ್ಮ ಲೇಖನದಲ್ಲಿ ಬರೆದುಕೊಂಡಿದ್ದಾರೆ.

ಆದರೆ, ಇದಕ್ಕೆ ಸಚಿವ ಆರ್​​.ವಿ.ದೇಶಪಾಂಡೆ ತಿರುಗೇಟು ಕೊಟ್ಟಿದ್ದಾರೆ. ದಿನೇಶ್ ಅಮೀನ್ ಮಟ್ಟು ಬೇಜವಾಬ್ದಾರಿಯುತ ಹೇಳಿಕೆ ನೀಡುತ್ತಿದ್ದಾರೆ, ಅವರು ಬಿಜೆಪಿ ಮಾಧ್ಯಮ ಸಲಹೆಗಾರರೋ ಅಥವಾ ಕಾಂಗ್ರೆಸ್ ಮುಖ್ಯಮಂತ್ರಿಗೆ ಮಾಧ್ಯಮ ಸಲಹೆಗಾರರೋ ಅಂತ ಟ್ವಿಟರ್'ನಲ್ಲಿ‌ ಸಚಿವ ಅರ್. ವಿ. ದೇಶಪಾಂಡೆ ಪ್ರಶ್ನೆ ಮಾಡಿದ್ದಾರೆ.

Scroll to load tweet…
Scroll to load tweet…