ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ಭೇಟಿ?
- ಸಿಎಂ ಸಿದ್ದರಾಮಯ್ಯ ಏ.13ಕ್ಕೆ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು ಎಂಬ ಸುಳ್ಳು ಸುದ್ದಿ ಹರಡಿಸಿದ ದುಷ್ಕರ್ಮಿಗಳು!
- ಪೋಸ್ಟನ್ನು ರೀಟ್ವೀಟ್ ಮಾಡಿದ ಬಿಜೆಪಿ ನಾಯಕಿ ಶಿಲ್ಪಾ ಗಣೇಶ್?!
ಬೆಂಗಳೂರು: ಅಮೆರಿಕಾ ಚುನಾವಣೆಗಳಲ್ಲಿ ’ರಷ್ಯಾ’ ವು ಎಷ್ಟು ಮಹತ್ವಕಾರಿಯೋ, ಹಾಗೆಯೇ ’ಪಾಕಿಸ್ತಾನ’ವು ಭಾರತದ ಚುನಾವಣೆಗಳಿಗೆ ಮುಖ್ಯವಾಗುತ್ತದೆ. ಅಂತಹದ್ದೊಂದು ಪ್ರಯತ್ನ ಇದೀಗ ಕರ್ನಾಟಕದ ಚುನಾವಣೆಯಲ್ಲಿ ನಡೆದಿದೆ.
ಸಿಎಂ ಸಿದ್ದರಾಮಯ್ಯ ಹಾಗೂ ಜಮೀರ್ ಅಹಮದ್ ಖಾನ್, ಕಳೆದ ಏ.13ರಂದು ಒಂದು ದಿವಸದ ಮಟ್ಟಿಗೆ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು, ಕರ್ನಾಟಕ ಚುನಾವಣೆ ಗೆಲ್ಲಲು ಐಎಸ್ಐ ಸಹಾಯ ಪಡೆಯುವ ಉದ್ದೇಶವೇ? ಕರಾಚಿಗೆ ಭೇಟಿ ನೀಡಿರುವ ಉದ್ದೇಶವೇನು ಎಂದು, ಸುಮಾರು 1ಲಕ್ಷ ಫಾಲೋವರ್ಸ್’ಗಳಿರುವ ಡಾ. ಗೌರವ್ ಪ್ರಧಾನ್ ಎಂಬವರು ಟ್ವೀಟಿಸಿದ್ದರು.
ಅದನ್ನು ಬಿಜೆಪಿ ನಾಯಕಿ ಶಿಲ್ಪಾ ಗಣೇಶ್ ಸೇರಿದಂತೆ ಹಲವು ಮಂದಿ ರೀಟ್ವೀಟ್ ಮಾಡಿದ್ದಾರೆ.
ಅದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ, ಅದು ಸುಳ್ಳು ಎಂದು ತಿಳಿದ ಕೂಡಲೇ ಆತ ಟ್ವೀಟನ್ನು ಡಿಲೀಟ್ ಮಾಡಿದ್ದಾನೆ. ಬಳಿಕ ವರಸೆ ಬದಲಾಯಿಸಿ ಈ ರಿತಿ ಟ್ವೀಟ್ ಮಾಡಿದ್ದಾನೆ.
.@HMOIndia this is the source of this letter https://t.co/qEge6jkh9D
— #GauravPradhan 🇮🇳 (@DrGPradhan) April 30, 2018
Kindly check urgently the source where the portal gets the letter from. It is a National security matter
Name of pilots seems WRONG but the captain number belongs to another captain https://t.co/wia2sn9YLH
ಈ ಕುಕೃತ್ಯಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಕರ್ನಾಟಕ ಚುನಾವಣೆಯನ್ನು ಪಾಕಿಸ್ತಾನದೊಂದಿಗೆ ನಂಟು ಕಲ್ಪಿಸುವ ಹತಾಶೆ ಕೆಲವರಿಗಿದೆ. ನಾನು ವಿದೇಶ ಪ್ರವಾಸಗಳನ್ನು ಇಷ್ಟಪಡುವುದಿಲ್ಲ. ಕಳೆದ 2 ವರ್ಷಗಳಲ್ಲಿ ಕೇವಲ ೨ ಬಾರಿ ವಿದೇಶ ಪ್ರವಾಸ ಕೈಗೊಂಡಿದ್ದೇನೆ. ಒಮ್ಮೆ ರಾಕೇಶ್ ಮೃತಪಟ್ಟಾಗ ಬೆಲ್ಜಿಯಂಗೆ, ಇನ್ನೊಮ್ಮೆ ಅನಿವಾಸಿ ಭಾರತೀರ ಸಂಘದ ಉದ್ಘಾಟನೆಗೆ ದುಬೈಗೆ ಹೋಗಿದ್ದೆ ಎಂದು ನೆನಪಿಸಿಕೊಂಡಿದ್ದಾರೆ.
Such is the desperation of some people that they invent a Pakistan connection to Karnataka Election too!
— Siddaramaiah (@siddaramaiah) May 1, 2018
I dislike foreign travel. The only two foreign visits I made in the last 2 years were to Belgium to bring my son Rakesh & to Dubai to inaugurate Non-Resident Kannadigas Assn. https://t.co/31AjmWR79b
ಅದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ಬೃಜೇಶ್ ಕಾಳಪ್ಪ, ಇದು ಬಿಜೆಪಿಗರ ಕೊಳಕು ಕುತಂತ್ರವೆಂದು ಹೇಳಿದ್ದಾರೆ. ಸಿಐಡಿ ಈ ಬಗ್ಗೆ ತನಿಖೆ ನಡೆಸಿ ಸುಳ್ಳು ದಾಖಲೆಗಳನ್ನು ಸೃಷ್ಟಿಸುವವರನ್ನು ಕಂಬಿ ಹಿಂದೆ ತಳ್ಳಬೇಕೆಂದು ಆಗ್ರಹಿಸಿದ್ದಾರೆ.
BJP Dirty Tricks Department is active. VERY ACTIVE.
— Brijesh Kalappa (@brijeshkalappa) April 30, 2018
Forging documents that show that @siddaramaiah and Shri Zameer Ahmed flew to Pakistan.
The State CID should immediately initiate action and put the ROGUES behind bars. pic.twitter.com/Tqs1MuLiHY