Asianet Suvarna News Asianet Suvarna News

ಕಡೆಗೂ ಮೋಸ ಹೋದವರಿಗೆ ಹಣ ನೀಡಲು ಒಪ್ಪಿಕೊಂಡ ಡೋಂಗಿ ಬಾಬಾ

ಡೋಂಗಿ ಬಾಬಾನ ಬೆನ್ನತ್ತಿ ಹೋದ ಸುವರ್ಣ ನ್ಯೂಸ್ ಬಾಬಾನ ಅಸಲಿ ಜಾತಕ ತೆರಿದಿಟ್ಟಿದೆ. ಸುವರ್ಣ ನ್ಯೂಸ್ ಸ್ಟುಡಿಯೋದಲ್ಲಿ ಡೊಂಗಿ ಬಾಬಾ ಮೋಸ ಹೋದ ಯುವತಿಯರಿಗೆ ಹಣ ನೀಡುವುದಾಗಿ ಭರವಸೆ ನೀಡಿದ್ದಾನೆ.

Fake Godman Dhananjay Swamy Agreed To Return The Money

ತುಮಕೂರು(ಮೇ.26): ಡೋಂಗಿ ಬಾಬಾನ ಬೆನ್ನತ್ತಿ ಹೋದ ಸುವರ್ಣ ನ್ಯೂಸ್ ಬಾಬಾನ ಅಸಲಿ ಜಾತಕ ತೆರಿದಿಟ್ಟಿದೆ. ಸುವರ್ಣ ನ್ಯೂಸ್ ಸ್ಟುಡಿಯೋದಲ್ಲಿ ಡೊಂಗಿ ಬಾಬಾ ಮೋಸ ಹೋದ ಯುವತಿಯರಿಗೆ ಹಣ ನೀಡುವುದಾಗಿ ಭರವಸೆ ನೀಡಿದ್ದಾನೆ.

ತುಮಕೂರಿನ ಕುಣಿಗಲ್ ಸಮೀಪದ ಬಿದನಗೆರೆಯ ಈತನ ದಿಢೀರ್ ಶ್ರೀಮಂತನ ಅಸಲಿಯತ್ತು ಇದೀಗ ಬಯಲಾಗಿದೆ.. ಈತನ ನಯಮಾತು ನಂಬಿ ಮೋಸ ಹೋದೋರೆಲ್ಲಾ ಇವನ ವಿರುದ್ಧ ತಿರುಗಿ ಬಿದ್ದಿದ್ದಾರೆ. ಸುವರ್ಣ ನ್ಯೂಸ್ ಸ್ಟುಡಿಯೋಗೆ ಬಂದು ಕಣ್ಣೀರು ಹಾಕಿ ನಾನವನಲ್ಲ. ನಂದೇನು ತಪ್ಪಿಲ್ಲ. ನಾನು ಯಾರ ಬಳಿಯೂ ಹಣ ಪಡೆದಿಲ್ಲ ಅಂತ ಅವಲತ್ತುಕೊಂಡಿದ್ದಾನೆ. 

ಇನ್ನು ನನ್ನ  ಕಪಟತನ ಕಾವಿಯೊಳಗಿನ ರೋಲ್​ಕಾಲ್​ ಬುದ್ಧಿ ಕುಣಿಗಲ್ ಜನಕ್ಕೆ ಗೊತ್ತಾಗಬಾರ್ದು ಅಂತ ಸುವರ್ಣ ನ್ಯೂಸ್​ ಚಾನಲ್ ವೀಕ್ಷಿಸದಂತೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದ ಈ ಕಿಲಾಡಿ. ಮೋಸ ಹೋದ ಯುವತಿಯರು ಕೂಡ ನಮ್ಮ  ಸ್ಟುಡಿಯೋಗೆ ಬಂದು ಈತನ ಮೋಸ ಪ್ರಶ್ನೆ ಮಾಡಿದ್ದರು. ಮೊದ್ಲಿಗೆ ಇವರ್ಯಾರು ಅಂತಾನೇ ಗೊತ್ತಿಲ್ಲ. ದುಡ್ಡು ಪಡೆದಿಲ್ಲ ಅಂತತೆಲ್ಲಾ ಸಮರ್ಥನೆ ಮಾಡಿಕೊಂಡ. ಕೆಲವರು ಪೋನ್ ಮಾಡಿ ಈತನ ಮೋಸದ ಗಂಟನ್ನ ಎಳೆ ಎಳೆಯಾಗಿ ಬಿಚ್ಚಿಟ್ಟರೂ ಈತ ಸುಲಭವಾಗಿ ಒಪ್ಪಿಕೊಳ್ಳಲಿಲ್ಲ.

ಈಗ ಮೋಸ ಹೋದವರ ವಾಗ್ದಾಳಿ ಹೆಚ್ಚಾದವೋ ಸ್ಟುಡಿಯೋದಿಂದಲೇ ಡೋಂಗಿ ಕಾಲ್ಕಿತ್ತ. ಕೊನೆಗೆ ಮೋಸ ಹೋದ ಯುವತಿಯರಿಗೆ ಇಂದು ಬೆಳಗ್ಗೆ 10 ಗಂಟೆಗೆ ಒಂದೂವರೆ ಲಕ್ಷ ರೂಪಾಯಿ ವಾಪಸ್ ಕೊಡುತ್ತೇನೆ ಅಂತಲೂ ಒಪ್ಪಿಕೊಂಡಿದ್ದಾನೆ. ಒಟ್ಟಿನಲ್ಲಿ ನೂರಾರು ಜನರಿಗೆ ಲಕ್ಷ ಲಕ್ಷ ಹಣ ಪೀಕಿ ಉಂಡೆನಾಮ ಬಳಿಯುತ್ತಿದ್ದ ಈ ಖತರ್ನಾಕ್​ ಆಸಾಮಿಯ ಅಸಲಿಯತ್ತನ್ನು ಬಯಲಿಗೆಳೆದ ಸುವರ್ಣ ನ್ಯೂಸ್'ಗೆ ಮೋಸ ಹೋದವರು ಕರೆ ಮಾಡಿ ಅಭಿನಂದನೆ ತಿಳಿಸಿದ್ದಾರೆ.

Follow Us:
Download App:
  • android
  • ios