Asianet Suvarna News Asianet Suvarna News

ಉಪ ಚುನಾವಣೆಯಿಂದ ದೂರ ಉಳಿಯಲಿದ್ದಾರೆ ಸಿದ್ದರಾಮಯ್ಯ?

ವಿಧಾನಸಭೆ ಹಾಗೂ ಲೋಕಸಭೆ ಉಪಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣವಾಗಿ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದಾರೆ.  

Faking News Farmer CM Siddaramaiah
Author
Bengaluru, First Published Oct 8, 2018, 2:20 PM IST

ಬೆಂಗಳೂರು :  ವಿಧಾನಸಭೆ ಹಾಗೂ ಲೋಕಸಭೆ ಉಪಚುನಾವಣೆಯಲ್ಲಿ ವಿಶ್ರಾಂತಿ ಪಡೆಯಲು ಮಾಜಿ ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.  

ನಾನೊಬ್ಬ ರಾಷ್ಟ್ರಮಟ್ಟದ ರಾಜಕಾರಣಿ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾನೇ ನೇತೃತ್ವ ವಹಿಸಿದ್ದೆ. ಕ್ರಿಕೆಟ್‌ನಲ್ಲಿ ದುರ್ಬಲ ತಂಡಗಳ ವಿರುದ್ಧ ನಾಯಕನಿಗೆ ವಿಶ್ರಾಂತಿ ನೀಡುವಂತೆ ನನಗೆ ವಿಶ್ರಾಂತಿಯ ಅಗತ್ಯವಿದೆ.

ಉಪ ಚುನಾವಣೆಗಳಿಗೆಲ್ಲಾ ಮಹತ್ವ ನೀಡಬೇಕಾದ ಅಗತ್ಯವಿಲ್ಲ. ಬೇಕಿದ್ದರೆ ಈ ಬಾರಿ ನಾನು ಮನೆಯಲ್ಲೇ ಕುಳಿತು ಪ್ರಚಾರಕ್ಕೆ ಬೆಂಬಲ ನೀಡುತ್ತೇನೆ’ ಎಂದು ಸಿದ್ದರಾಮಯ್ಯ ತಮ್ಮದೇ ಧಾಟಿಯಲ್ಲಿ ಹೇಳಿದ್ದಾರೆ. 

ಇದೇ ವೇಳೆ ತಮ್ಮನ್ನು ನಿರ್ಲಕ್ಷಿಸಬಾರದು ಎಂಬ ಕಾರಣಕ್ಕೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳುವುದನ್ನು ಸಿದ್ದರಾಮಯ್ಯ ಮರೆಯಲಿಲ್ಲ ಎಂದು ಸುಳ್‌ಸುದ್ದಿ ಮೂಲಗಳು ತಿಳಿಸಿವೆ.

Follow Us:
Download App:
  • android
  • ios