ಕಳೆದ 9 ದಿನಗಳಿಂದ ಬೆಂಗಳೂರಿನ ಖಾಸಗಿ ರೆಸಾರ್ಟ್‌ನಲ್ಲಿ ಬೀಡುಬಿಟ್ಟಿದ್ದ ಗುಜರಾತ್‌ನ ಕಾಂಗ್ರೆಸ್ ಶಾಸಕರು ತಡರಾತ್ರಿ ಗುಜರಾತ್‌ಗೆ ವಾಪಸ್ ಆಗಿದ್ದಾರೆ.

ಬೆಂಗಳೂರು(ಆ.07): ಕಳೆದ 9 ದಿನಗಳಿಂದ ಬೆಂಗಳೂರಿನ ಖಾಸಗಿ ರೆಸಾರ್ಟ್‌ನಲ್ಲಿ ಬೀಡುಬಿಟ್ಟಿದ್ದ ಗುಜರಾತ್‌ನ ಕಾಂಗ್ರೆಸ್ ಶಾಸಕರು ತಡರಾತ್ರಿ ಗುಜರಾತ್‌ಗೆ ವಾಪಸ್ ಆಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದಕ್ಕೂ ಮುನ್ನ ರೆಸಾರ್ಟ್‌'ನಲ್ಲಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು. ಇದೇ ವೇಳೆ ರೆಸಾರ್ಟ್‌'ನಲ್ಲಿ ಅಣ್ಣ-ತಂಗಿಯ ಭಾಂದವ್ಯ ಅನಾವರಣವಾಯ್ತು. ಇಂದು ರಕ್ಷಾಬಂಧನವಾಗಿರುವುದರಿಂದ ಗುಜರಾತ್‌ನ ಮಹಿಳೆಯೊಬ್ಬರು ಡಿ.ಕೆ.ಶಿವಕುಮಾರ್‌ ಅವರಿಗೆ ರಾಖಿ ಕಟ್ಟುವ ಮೂಲಕ ಅಣ್ಣ -ತಂಗಿಯ ಭಾಂದವ್ಯಕ್ಕೆ ಸಾಕ್ಷಿಯಾದ್ರು.

ಕೇವಲ ಡಿ.ಕೆ.ಶಿವಕುಮಾರ್‌ಗೆ ಮಾತ್ರವಲ್ಲ. ಸಂಸದ ಡಿ.ಕೆ.ಸುರೇಶ್‌ಗೂ ರಾಖಿ ಕಟ್ಟುವ ಮೂಲಕ ಅಣ್ಣ-ತಂಗಿಯ ಭಾಂದವ್ಯ ತೋರಿದ್ರು.