Asianet Suvarna News Asianet Suvarna News

ಕರ್ನಾಟಕ ಸರ್ಕಾರದ ವಿರುದ್ಧ ಮತ್ತೊಮ್ಮೆ ಪ್ರಧಾನಿ ಮೋದಿ ಗರಂ

ಪ್ರಧಾನಿ ನರೇಂದ್ರ ಮೋದಿ ಇದೀಗ ಮತ್ತೊಮ್ಮೆ ಕರ್ನಾಟಕ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾಲ ಮನ್ನಾದಂತ ಯೋಜನೆಗಳು ಸರ್ಕಾರ ರಾಜಕೀಯ ಸ್ಟಂಟ್ ಎಂದಿದ್ದಾರೆ. 

Farm Loan Waiving Is Karnataka Govt Political Stunt Says PM Narendra Modi
Author
Bengaluru, First Published Jan 2, 2019, 8:08 AM IST

ನವದೆಹಲಿ :  ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯ ಗಳಲ್ಲಿ ಕಾಂಗ್ರೆಸ್ಸಿನ ಸರ್ಕಾರಗಳು ರೈತರ ಸಾಲ ಮನ್ನಾ ಮಾಡುತ್ತಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಸ್ಟಂಟ್ ಎಂದು ಬಣ್ಣಿಸಿದ್ದಾರೆ.

ಕಾಂಗ್ರೆಸ್ಸಿನ ಈ ದಾರಿ ತಪ್ಪಿಸುವ ಘೋಷಣೆ ಗಳಿಂದ ಬಹುತೇಕ ರೈತರಿಗೆ ಅನುಕೂಲ ವಾಗುವುದಿಲ್ಲ. ಏಕೆಂದರೆ, ಬ್ಯಾಂಕುಗ ಳಿಂದ ಸಾಲ ಪಡೆಯುವ ರೈತರು ಅಲ್ಪ ಮಂದಿ ಮಾತ್ರ ಎಂದೂ ಅವರು ಹೇಳಿದ್ದಾರೆ.

ಈ ಹಿಂದೆಯೂ ಕೂಡ ಅನೇಕ ಬಾರಿ ಕರ್ನಾಟಕ ಸರ್ಕಾರ ರೈತರ ಸಾಲಮನ್ನಾ ಮಾಡಿಲ್ಲ. ಕೇವಲ 800 ರೈತರ ಸಾಲಮನ್ನಾ ಮಾಡಿದೆ ಎಂದು ಹೇಳಿದ್ದರು. 

ಈ ಬಗ್ಗೆ ಜೆಡಿಎಸ್ ಮುಖಂಡರು ಪ್ರತಿಕ್ರಿಯಿಸಿ ರಾಜ್ಯದಲ್ಲಿ 60 ಸಾವಿರ ರೈತರ ಸಾಲ ಮನ್ನಾ ಮಾಡಲಾಗಿದೆ ಎಂದು ಪ್ರಧಾನಿ ಮೋದಿಗೆ ತಿರುಗೇಟಿ ನೀಡಿದ್ದಾರೆ. 

Follow Us:
Download App:
  • android
  • ios