ಕರ್ನಾಟಕ ಸರ್ಕಾರದ ವಿರುದ್ಧ ಮತ್ತೊಮ್ಮೆ ಪ್ರಧಾನಿ ಮೋದಿ ಗರಂ
ಪ್ರಧಾನಿ ನರೇಂದ್ರ ಮೋದಿ ಇದೀಗ ಮತ್ತೊಮ್ಮೆ ಕರ್ನಾಟಕ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾಲ ಮನ್ನಾದಂತ ಯೋಜನೆಗಳು ಸರ್ಕಾರ ರಾಜಕೀಯ ಸ್ಟಂಟ್ ಎಂದಿದ್ದಾರೆ.
ನವದೆಹಲಿ : ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯ ಗಳಲ್ಲಿ ಕಾಂಗ್ರೆಸ್ಸಿನ ಸರ್ಕಾರಗಳು ರೈತರ ಸಾಲ ಮನ್ನಾ ಮಾಡುತ್ತಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಸ್ಟಂಟ್ ಎಂದು ಬಣ್ಣಿಸಿದ್ದಾರೆ.
ಕಾಂಗ್ರೆಸ್ಸಿನ ಈ ದಾರಿ ತಪ್ಪಿಸುವ ಘೋಷಣೆ ಗಳಿಂದ ಬಹುತೇಕ ರೈತರಿಗೆ ಅನುಕೂಲ ವಾಗುವುದಿಲ್ಲ. ಏಕೆಂದರೆ, ಬ್ಯಾಂಕುಗ ಳಿಂದ ಸಾಲ ಪಡೆಯುವ ರೈತರು ಅಲ್ಪ ಮಂದಿ ಮಾತ್ರ ಎಂದೂ ಅವರು ಹೇಳಿದ್ದಾರೆ.
ಈ ಹಿಂದೆಯೂ ಕೂಡ ಅನೇಕ ಬಾರಿ ಕರ್ನಾಟಕ ಸರ್ಕಾರ ರೈತರ ಸಾಲಮನ್ನಾ ಮಾಡಿಲ್ಲ. ಕೇವಲ 800 ರೈತರ ಸಾಲಮನ್ನಾ ಮಾಡಿದೆ ಎಂದು ಹೇಳಿದ್ದರು.
ಈ ಬಗ್ಗೆ ಜೆಡಿಎಸ್ ಮುಖಂಡರು ಪ್ರತಿಕ್ರಿಯಿಸಿ ರಾಜ್ಯದಲ್ಲಿ 60 ಸಾವಿರ ರೈತರ ಸಾಲ ಮನ್ನಾ ಮಾಡಲಾಗಿದೆ ಎಂದು ಪ್ರಧಾನಿ ಮೋದಿಗೆ ತಿರುಗೇಟಿ ನೀಡಿದ್ದಾರೆ.