ಮತ್ತೆ ಸಾಲ ಮನ್ನಾ ಭರವಸೆ
ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಸಾಧನೆಯನ್ನು ಮನಸಾರೆ ಕೊಂಡಾಡಿದ ರಾಹುಲ್ ಗಾಂಧಿ, ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ನ್ನು ಅಧಿಕಾರಕ್ಕೆ ತಂದರೆ ರೈತರ 70 ಸಾವಿರ ಕೋಟಿ ರು. ಮೊತ್ತದ ಸಾಲ ಮನ್ನಾ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಮಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಸಾಧನೆಯನ್ನು ಮನಸಾರೆ ಕೊಂಡಾಡಿದ ರಾಹುಲ್ ಗಾಂಧಿ, ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ನ್ನು ಅಧಿಕಾರಕ್ಕೆ ತಂದರೆ ರೈತರ 70 ಸಾವಿರ ಕೋಟಿ ರು. ಮೊತ್ತದ ಸಾಲ ಮನ್ನಾ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಅಭಿವೃದ್ಧಿ ಕಾರ್ಯದ ಮೂಲಕ ನಾವು ಪ್ರಧಾನಿ ಮೋದಿಗೆ ಸವಾಲು ಹಾಕುತ್ತೇವೆ. ಬಿಜೆಪಿಯು ಸಂಘಟನೆಯೊಂದರ ಧ್ವನಿಯಾಗಿದೆ ಎಂದು ಆರ್ ಎಸ್ಎಸ್ನ ಹೆಸರೆತ್ತದೆ ರಾಹುಲ್ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ್, ಕೆಪಿಸಿಸಿ ರಾಜ್ಯ ಉಸ್ತುವಾರಿ ವೇಣುಗೋಪಾಲ್, ಲೋಕಸಭೆಯಲ್ಲಿ ವಿಪಕ್ಷ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಚಿವ ವೀರಪ್ಪ ಮೊಯ್ಲಿ ಸೇರಿದಂತೆ ಕಾಂಗ್ರೆಸ್ನ ಮುಖಂಡರು, ಶಾಸಕರು ಇದ್ದರು.