Asianet Suvarna News Asianet Suvarna News

ಬೀದಿಗೆ ಬಿತ್ತು ಬಿಜೆಪಿ ಭಿನ್ನಮತ; ಬಿಜೆಪಿ ಶಾಸಕ Vs ಬಿಜೆಪಿ ಅಭ್ಯರ್ಥಿ

ಸಂಸದ ಶ್ರೀರಾಮುಲು ಇಂದು ಮತಕ್ಷೇತ್ರ ಪ್ರಚಾರಕ್ಕೆ ಮೊಳಕಾಲ್ಮೂರು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಇದರ ಬೆನ್ನಲ್ಲೇ ತಿಪ್ಪೇಸ್ವಾಮಿ ಬೆಂಬಲಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Fight Between BJP Candidate Vs BJP MLA Aides

ಮೊಳಕಾಲ್ಮೂರು(ಏ.13): ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಹಾಗೂ ಹಾಲಿ ಶಾಸಕ ತಿಪ್ಪೇಸ್ವಾಮಿ ಬೆಂಬಲಿಗರ ನಡುವೆ ಮಾರಾಮಾರಿ ಸಂಭವಿಸಿದೆ.

ಶಾಸಕ ತಿಮ್ಮೇಸ್ವಾಮಿ ಬೆಂಬಲಿಗರು ಶ್ರೀರಾಮುಲು ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದಾರೆ. ಜೊತೆಗೆ ನೂರಾರು ತಿಪ್ಪೇಸ್ವಾಮಿ ಬೆಂಬಲಿಗರು ಶ್ರೀರಾಮುಲು ಈ ಕ್ಷೇತ್ರದಲ್ಲಿ ಸ್ಪರ್ಧಿಸದಂತೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಸಂಸದ ಶ್ರೀರಾಮುಲು ಇಂದು ಮತಕ್ಷೇತ್ರ ಪ್ರಚಾರಕ್ಕೆ ಮೊಳಕಾಲ್ಮೂರು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಇದರ ಬೆನ್ನಲ್ಲೇ ತಿಪ್ಪೇಸ್ವಾಮಿ ಬೆಂಬಲಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow Us:
Download App:
  • android
  • ios