ಪವರ್ ಮಿನಿಸ್ಟರ್’ಗೆ ಎದುರಾಗಿದೆ ಬಂಧನದ ಭೀತಿ; ಡಿಕೆಶಿ ವಿರುದ್ಧ ಎಫ್’ಐಆರ್ ದಾಖಲು
ಇಂಧನ ಸಚಿವ ಡಿ.ಕೆ. ಶಿವಕುಮಾರ್ಗೆ ಬಂಧನ ಭೀತಿ ಶುರುವಾಗಿದೆ. ಐಟಿ ದಾಳಿ ವಿಚಾರವಾಗಿ ಎಫ್ಐಆರ್ ದಾಖಲಾಗಿದೆ. ಸರ್ಕಾರದ ಪವರ್ ಫುಲ್ ಮಿನಿಸ್ಟರ್ ಅಂತಲೇ ಕರೆಸಿಕೊಳ್ಳುವ ಡಿ.ಕೆ.ಶಿವಕುಮಾರ್ಗೆ ಇದೀಗ ಸಂಕಷ್ಟ ಎದುರಾಗಿದೆ.
ಬೆಂಗಳೂರು (ಫೆ.14): ಇಂಧನ ಸಚಿವ ಡಿ.ಕೆ. ಶಿವಕುಮಾರ್ಗೆ ಬಂಧನ ಭೀತಿ ಶುರುವಾಗಿದೆ. ಐಟಿ ದಾಳಿ ವಿಚಾರವಾಗಿ ಎಫ್ಐಆರ್ ದಾಖಲಾಗಿದೆ. ಸರ್ಕಾರದ ಪವರ್ ಫುಲ್ ಮಿನಿಸ್ಟರ್ ಅಂತಲೇ ಕರೆಸಿಕೊಳ್ಳುವ ಡಿ.ಕೆ.ಶಿವಕುಮಾರ್ಗೆ ಇದೀಗ ಸಂಕಷ್ಟ ಎದುರಾಗಿದೆ.
ಐಟಿ ದಾಳಿ ವೇಳೆ ಹಾಳೆ ಹರಿದು ಖೆಡ್ಡಾಗೆ ಬಿದ್ದಿದ್ದ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಇದೀಗ ಬಂಧನದ ಭೀತಿಯಲ್ಲಿದ್ದಾರೆ. ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಎಫ್'ಐಆರ್ ದಾಖಲಾಗಿರುವ ಎಕ್ಸ್'ಕ್ಲೂಸಿವ್ ಸುದ್ದಿಯನ್ನು ಮೊದಲು ಬ್ರೇಕ್ ಮಾಡಿದ್ದೇ ಸುವರ್ಣನ್ಯೂಸ್. ನಿನ್ನೆ ರಾತ್ರಿ 9 ಗಂಟೆಗೆ ಸುದ್ದಿಯನ್ನ ರಾಜ್ಯದ ಜನತೆಗೆ ಮೊದಲು ತಿಳಿಸಿದ್ದೇ ನಾವು. ಇನ್ನು ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಕ್ರಿಮಿನಲ್ ಪ್ರಾಸಿಕ್ಯೂಷನ್ ಗೆ ಐಟಿ ಅಧಿಕಾರಿಗಳು ಮನವಿ ಮಾಡಿದ ಹಿನ್ನೆಲೆಯಲ್ಲಿ ಬೆಂಗಳೂರು ಆರ್ಥಿಕ ಅಪರಾಧಗಳ ನ್ಯಾಯಪೀಠ ಎಫ್ಐಆರ್ ದಾಖಲಿಸಿದೆ.
ಪ್ರಮುಖ ಸಾಕ್ಷ್ಯಗಳ ನಾಶಕ್ಕೆ ಡಿ.ಕೆ.ಶಿವಕುಮಾರ್ ಯತ್ನಿಸಿರುವ ಆರೋಪ ಹಿನ್ನೆಲೆಯಲ್ಲಿ ಮಾರ್ಚ್ 22 ಕ್ಕೆ ಕೋರ್ಟ್ ಗೆ ಹಾಜರಾಗಲು ಸೂಚನೆ ನೀಡಲಾಗಿದೆ. ಈ ಸಂಬಂಧ ಸಚಿವ ಡಿ.ಕೆ.ಶಿವಕುಮಾರ್ ಗೆ ಆರ್ಥಿಕ ಅಪರಾಧಗಳ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು , ಡಿ.ಕೆ.ಶಿ ಈಗ ಬೇಲ್ ಪಡೆಯಬೇಕಾದ ಅನಿವಾರ್ಯತೆ ಎದುರಾಗಿದೆ.
ಡಿ.ಕೆ.ಶಿವಕುಮಾರ್ ವಿರುದ್ಧ ಕ್ರಿಮಿನಲ್ ಪ್ರಾಸಿಕ್ಯೂಷನ್ ಅನುಮತಿ ನೀಡಲಾಗಿದ್ದು, ಐಪಿಸಿ ಸೆಕ್ಷನ್ 201, 204 ಹಾಗೂ ಐಟಿ ಕಾಯ್ದೆ 276 ಸಿ ಅಡಿಯಲ್ಲಿ ಕೇಸ್ ದಾಖಲಾಗಿದೆ. ಐಟಿ ಕಾಯ್ದೆ 276 - ಉದ್ದೇಶಪೂರ್ವಕವಾಗಿ ತೆರಿಗೆ ವಂಚನೆ ಆರೋಪದಡಿಯಲ್ಲಿ 6 ತಿಂಗಳಿನಿಂದ 7 ವರ್ಷದವರೆಗೂ ಜೈಲು ಶಿಕ್ಷೆಗೆ ಗುರಿಪಡಿಸುವ ಅವಕಾಶ ಇದೆ. ಇನ್ನು. ಐಪಿಸಿ 201 ಹಾಗೂ 204 - ಸಾಕ್ಷ್ಯಗಳನ್ನು ನಾಶ ಮಾಡಿರುವ ಆರೋಪ ಈ ಸೆಕ್ಷನ್ ಗಳ ಅಡಿ ಕೇಸ್ ದಾಖಲಾಗಿದೆ. ಐಟಿ ದಾಳಿ ವೇಳೆ ಡಿಕೆ ಶಿವಕುಮಾರ್ ಜೇಬಿನಲ್ಲಿದ್ದ ಸಣ್ಣ ಸಣ್ಣ ಕಾಗದದ ಚೂರು ಪತ್ತೆಯಾಗಿತ್ತು. ಕಾಗದದ ಚೂರುಗಳೆಲ್ಲವನ್ನೂ ಸಂಗ್ರಹಿಸಿ ಐಟಿ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದರು. ಡಿಕೆಶಿ ಜತೆಗೆ ಹಲವು ಕಂಪನಿಗಳು ಹಾಗೂ ವ್ಯಕ್ತಿಗಳ ಹಣಕಾಸು ವ್ಯವಹಾರ ಇರೋದು ಕಂಡು ಬಂದಿತ್ತು.