ನಿರ್ಮಾಪಕ ಸುಂದರ್, ನಿರ್ದೇಶಕ ನಾಗಶೇಖರ್, ಸಾಹಸ ನಿರ್ದೇಶಕ ರವಿ ವರ್ಮಾ ವಿರುದ್ಧ ಕೇಸ್ದಲಾಗಿದ್ದು, ಒಟ್ಟು ಚಿತ್ರತಂಡದ ವಿರುದ್ಧ ಸೆಕ್ಷನ್ 188, 304 ರಂತೆ ಕೇಸ್ ದಾಖಲಿಸಿಕೊಳ್ಳಲಾಗಿದೆ
ಬೆಂಗಳೂರು(ನ.08): ಇಬ್ಬರು ಖಳನಟರ ದುರಂತ ಸಾವಿಗೆ ಕಾರಣದವಾದ ಚಿತ್ರೀಕರಣದಲ್ಲಿ ನಿಯಮ ಉಲ್ಲಂಘನೆ ಕಂಡು ಬಂದಿದ್ದು ಈ ಹಿನ್ನಲೆಯಲ್ಲಿ ನಿರ್ಮಾಪಕ, ನಿರ್ದೇಶಕ, ಸಾಹಸ ನಿರ್ದೇಶಕರ ವಿರುದ್ಧ FIR ದಾಖಲು ಮಾಡಲಾಗಿದೆ.
ನಿರ್ಮಾಪಕ ಸುಂದರ್, ನಿರ್ದೇಶಕ ನಾಗಶೇಖರ್, ಸಾಹಸ ನಿರ್ದೇಶಕ ರವಿ ವರ್ಮಾ ವಿರುದ್ಧ ಕೇಸ್ದಲಾಗಿದ್ದು, ಒಟ್ಟು ಚಿತ್ರತಂಡದ ವಿರುದ್ಧ ಸೆಕ್ಷನ್ 188, 304 ರಂತೆ ಕೇಸ್ ದಾಖಲಿಸಿಕೊಳ್ಳಲಾಗಿದೆ
ಸೆಕ್ಷನ್ 188 ಅಂದರೆ ಷರತ್ತುಗಳನ್ನು ಉಲ್ಲಂಘಿಸಿದ ಆರೋಪವಾಗಿದ್ದು, BWSSB ಅನುಮತಿ ಪತ್ರದಲ್ಲಿ ನಮೂದಿಸಿದ್ದ ಷರತ್ತುಗಳು ಚಿತ್ರತಂಡ ಉಲ್ಲಂಘಿಸಿದೆ. ಸೆಕ್ಷನ್ 304 ಅಂದರೆ ಉದ್ದೇಶವಿಲ್ಲದೆ ಕೊಲೆಗೈದ ಪ್ರಕರಣವಾಗಿದ್ದು, ಸೆಕ್ಷನ್ 304ರ ಆರೋಪ ಸಾಬೀತಾದರೆ ಹತ್ತು ವರ್ಷ ಜೈಲು ಶಿಕ್ಷೆ ವಿಧಿಸಬಹುದಾಗಿದೆ.
