ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ.  ಬೆಂಗಳೂರಿನ ಕೆ.ಆರ್ ಮಾರ್ಕೆಟ್’ನಲ್ಲಿ  ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿದೆ.

ಬೆಂಗಳೂರು (ಜ.08): ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಕೆ.ಆರ್ ಮಾರ್ಕೆಟ್’ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಲ್ಲಿರುವ ಕೈಲಾಶ್ ಬಾರ್’ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಬಾರ್’ನಲ್ಲಿ ಮಲಗಿದ್ದ ಐವರೂ ಕೂಡ ಸಜೀವ ದಹನವಾಗಿದ್ದಾರೆ. ಮಂಜುನಾಥ್ , ಕೀರ್ತಿ, ಮಹೇಶ್, ಸ್ವಾಮಿ ಹಾಗೂ‌ ಪ್ರಸಾದ್ ಸುಟ್ಟು ಕರಕಲಾಗಿದ್ದಾರೆ. ಮುಂಜಾನೆ 2.30ರ ಸುಮಾರಿಗೆ ಈ ದುರ್ಘಟನೆ ನಡೆದಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಬಾರ್’ನ ಕೆಳಮಹಡಿಗೆ ಬೆಂಕಿ ಬಿದ್ದಿದೆ. ಈ ವೇಳೆ ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದವರು ಹೊಗೆ ಬರುತ್ತಿರುವುದನ್ನು ನೋಡಿ‌ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಬಳಿಕ ಸ್ಥಳಕ್ಕೆ 3 ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸಿವೆ. 25 ಕ್ಕೂ ಅಧಿಕ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಘಟನೆ ಬಳಿಕ ಸ್ಥಳಕ್ಕೆ ಆಗಮಿಸಿ ಡಿಸಿಪಿ ಅನುಚೇತ್ ಈ ಬಗ್ಗೆ ಮಾಹಿತಿ ಪಡೆದಿದ್ದಾರೆ.