ಶಾಲೆಯಲ್ಲಿ ಓದುತ್ತಿರುವ ಉಳಿದ ವಿದ್ಯಾರ್ಥಿಗಳು ಮಾನ್ಯತೆ ಪಡೆದ ಸರ್ಕಾರಿ ಶಾಲೆಗೆಳಿಗೆ ವರ್ಗಾವಣೆ ಮಾಡಿಕೊಳ್ಳಲು ಆದೇಶದಲ್ಲಿ ತಿಳಿಸಲಾಗಿದೆ.

ವಿಜಯಪುರ(ಫೆ.21): ಒಂದೆನೇ ತರಗತಿಯ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಸಿಂದಗಿಪಟ್ಟಣದಲ್ಲಿರು ಶಣ್ಮುಖೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿದ್ದರಾಮಸಿಂಗ ಜಮಾದಾರ(8) ನೇಣಿಗೆ ಶರಣಾಗಿದ್ದ ವಿದ್ಯಾರ್ಥಿ. ಆತ್ಮಹತ್ಯೆ ಮಾಡಿಕೊಂಡ ಕಾರಣಕ್ಕಾಗಿ ಶಾಲೆಯ ಮಾನ್ಯತೆಯನ್ನು ವಿಜಯಪುರದ ಕ್ಷೇತ್ರ ಶಿಕ್ಷಣ ಇಲಾಖೆಯ ಉಪನಿರ್ದೆಶಕರು ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ. ಶಾಲೆಯಲ್ಲಿ ಓದುತ್ತಿರುವ ಉಳಿದ ವಿದ್ಯಾರ್ಥಿಗಳು ಮಾನ್ಯತೆ ಪಡೆದ ಸರ್ಕಾರಿ ಶಾಲೆಗೆಳಿಗೆ ವರ್ಗಾವಣೆ ಮಾಡಿಕೊಳ್ಳಲು ಆದೇಶದಲ್ಲಿ ತಿಳಿಸಲಾಗಿದೆ.