ಟಿಪ್ಪು ಜಯಂತಿ ವಿಚಾರದಲ್ಲಿ ಪಕ್ಷಗಳು ಕಚ್ಚಾಟ ನಡೆಸುವುದನ್ನು ಬಿಟ್ಟು ರೈತರ ಕಡೆ ಗಮನ ಹರಿಸಬೇಕು. ಇಲ್ಲದಿದ್ದರೆ ಹೇಗೆ ಹೋರಾಟ ಮಾಡಬೇಕು ಎಂಬುದು ಗೊತ್ತಿದೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಎಚ್ಚರಿಸಿದರು.

ಚಿತ್ರದುರ್ಗ/ದಾವಣಗೆರೆ: ಟಿಪ್ಪು ಜಯಂತಿ ವಿಚಾರದಲ್ಲಿ ಪಕ್ಷಗಳು ಕಚ್ಚಾಟ ನಡೆಸುವುದನ್ನು ಬಿಟ್ಟು ರೈತರ ಕಡೆ ಗಮನ ಹರಿಸಬೇಕು. ಇಲ್ಲದಿದ್ದರೆ ಹೇಗೆ ಹೋರಾಟ ಮಾಡಬೇಕು ಎಂಬುದು ಗೊತ್ತಿದೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಎಚ್ಚರಿಸಿದರು.

Add Asianetnews Kannada as a Preferred SourcegooglePreferred

ಅನ್ನದಾತರ ಸಂಕಷ್ಟ ತಿಳಿಯಲು ಸೋಮವಾರ ತಮ್ಮ ರಾಜ್ಯ ಪ್ರವಾಸ ಆರಂಭಿಸಿದ ಅವರು ಚಿತ್ರದುರ್ಗ ತಾಲೂಕಿನ ಭರಮಸಾಗರದ ರೈತರ ಜಮೀನಿಗೆ ಭೇಟಿ ನೀಡಿ, ಸೈನಿಕ ಕೀಟಬಾಧೆಯಿಂದ ನಾಶವಾಗಿರುವ ಮೆಕ್ಕೆಜೋಳದ ಬೆಳೆಗಳನ್ನು ವೀಕ್ಷಿಸಿ ಮಾತನಾಡಿದರು.

 ಈ ನಡುವೆ ರೈತರ ಸಮಸ್ಯೆಗಳ ಕುರಿತು ಮಾತನಾಡಲು ಲೋಕಸಭಾ ಅಧಿವೇಶನದಲ್ಲಿ ನನಗೆ ಸರಿಯಾಗಿ ಅವಕಾಶ ನೀಡದೆ ತುಚ್ಛವಾಗಿ ಕಾಣಲಾಗುತ್ತಿದೆ ಎಂದು ದೇವೇಗೌಡ ಅವರು ದಾವಣಗೆರೆಯಲ್ಲಿ ಬೇಸರ ವ್ಯಕ್ತಪಡಿಸಿದರು