ಪ್ರಧಾನಿ ಮೊದಿ ನಿನ್ನೆ ಬಹರೈಚ್'ಗೆ ಆಗಮಿಸಿ ಬಿಜೆಪಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಬೇಕಿತ್ತು. ಆದರೆ ದಟ್ಟ ಮಂಜಿನಿಂದಾಗಿ ಅವರ ಹೆಲಿಕಾಪ್ಟರ್ ಬಹರೈಚ್'ನಲ್ಲಿ ಲ್ಯಾಂಡ್ ಆಗಲು ಸಾಧ್ಯವಾಗಲಿಲ್ಲ. ಹೀಗಾಗಿ ರ್ಯಾಲಿಯನ್ನು ರದ್ದುಗೊಳಿಸುವ ಬದಲು ಮೊಬೈಲ್​ ಮೂಲಕವೇ ಪರಿವರ್ತನ್ ರ್ಯಾಲಿ ಉದ್ದೇಶಿಸಿ ಮಾತನಾಡಿದರು.

ನವದೆಹಲಿ(ಡಿ.12): ಪ್ರಧಾನಿ ನರೇಂದ್ರ ಮೋದಿ ಮೊಬೈಲ್​ ಮೂಲಕ ಉತ್ತರ ಪ್ರದೇಶದ ಬಹರೈಚ್''ನಲ್ಲಿ ನಡೆದ 'ಪರಿವರ್ತನ್ ರ್ಯಾಲಿ'ಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.

Add Asianetnews Kannada as a Preferred SourcegooglePreferred

ಪ್ರಧಾನಿ ಮೊದಿ ನಿನ್ನೆ ಬಹರೈಚ್'ಗೆ ಆಗಮಿಸಿ ಬಿಜೆಪಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಬೇಕಿತ್ತು. ಆದರೆ ದಟ್ಟ ಮಂಜಿನಿಂದಾಗಿ ಅವರ ಹೆಲಿಕಾಪ್ಟರ್ ಬಹರೈಚ್'ನಲ್ಲಿ ಲ್ಯಾಂಡ್ ಆಗಲು ಸಾಧ್ಯವಾಗಲಿಲ್ಲ. ಹೀಗಾಗಿ ರ್ಯಾಲಿಯನ್ನು ರದ್ದುಗೊಳಿಸುವ ಬದಲು ಮೊಬೈಲ್​ ಮೂಲಕವೇ ಪರಿವರ್ತನ್ ರ್ಯಾಲಿ ಉದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ ಗೂಂಡಾ ರಾಜ್ ಇದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಇದರಿಂದ ಜನ ಬೇಸತ್ತು ಹೋಗಿದ್ದಾರೆ. ಪೊಲೀಸರಿಂದಲೂ ಈ ಗೂಂಡಾಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ನೀವು ಮುಕ್ತಿ ಪಡೆಯಬೇಕಾದರೆ ಗೂಂಡಾಗಳನ್ನು ಬೆಂಬಲಿಸುತ್ತಿರುವವರನ್ನು ತಿರಸ್ಕರಿಸಿ, ಬಿಜೆಪಿಗೆ ಬೆಂಬಲಿಸಿ ಎಂದು ಕರೆ ನೀಡಿದರು.