ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ಮಂಗಳೂರು ಚಲೋ ರ್ಯಾಲಿಗೆ ಸಂಬಂಧಿಸಿದಂತೆ ಹಲವಾರು ಬೆಳವಣಿಗೆಗಳು ನಡೆಯುತ್ತಿವೆ. ಒಂದೆಡೆ ಕಾರ್ಯಕರ್ತರನ್ನು ಬಂಧಿಸುತ್ತಿದ್ದರೆ, ಮತ್ತೊಂದೆಡೆ ಭದ್ರತಾ ದೃಷ್ಟಿಯಿಂದ ಯಡಿಯೂರಪ್ಪರನ್ನು ಮನೆಯಿಂದ ಹೊರಬರದಂತೆ ಪೊಲೀಸರು ಸೂಚಿಸಿದ್ದಾರೆ. ಈ ಮಧ್ಯೆ ಬಿಜೆಪಿ ಕಾರ್ಯಕರ್ತರಿಗಾಗಿ ತಯಾರಿಸಿದ್ದ ಊಟವೇ ನಾಪತ್ತೆಯಾಗಿದೆ ಎಂಬ ಮಾಹಿತಿಯೂ ಲಭಿಸಿದೆ.

ಬೆಂಗಳೂರು(ಸೆ.05): ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ಮಂಗಳೂರು ಚಲೋ ರ್ಯಾಲಿಗೆ ಸಂಬಂಧಿಸಿದಂತೆ ಹಲವಾರು ಬೆಳವಣಿಗೆಗಳು ನಡೆಯುತ್ತಿವೆ. ಒಂದೆಡೆ ಕಾರ್ಯಕರ್ತರನ್ನು ಬಂಧಿಸುತ್ತಿದ್ದರೆ, ಮತ್ತೊಂದೆಡೆ ಭದ್ರತಾ ದೃಷ್ಟಿಯಿಂದ ಯಡಿಯೂರಪ್ಪರನ್ನು ಮನೆಯಿಂದ ಹೊರಬರದಂತೆ ಪೊಲೀಸರು ಸೂಚಿಸಿದ್ದಾರೆ. ಈ ಮಧ್ಯೆ ಬಿಜೆಪಿ ಕಾರ್ಯಕರ್ತರಿಗಾಗಿ ತಯಾರಿಸಿದ್ದ ಊಟವೇ ನಾಪತ್ತೆಯಾಗಿದೆ ಎಂಬ ಮಾಹಿತಿಯೂ ಲಭಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಿಜೆಪಿ ರ್ಯಾಲಿ ಹಿನ್ನೆಲೆಯಲ್ಲಿ ಬೈಕ್ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಕಾರ್ಯಕರ್ತರಿಗಾಗಿ ನೆಲಮಂಗಲದ ಗುಡೇಮಾರನಳ್ಳಿ ಬಳಿಯ ಸಮುದಾಯ ಭವನವೊಂದರಲ್ಲಿ ಊಟವನ್ನು ತಯಾರಿಸಲಾಗಿತ್ತು. ಆದರೀಗ ರಾತ್ರೋ ರಾತ್ರಿ ಈ ಊಟ ನಾಪತ್ತೆಯಾಗಿದೆ ಎಂಬ ಮಾಹಿತಿ ಲಭಿಸಿದೆ. ನಿನ್ನೆ ರಾತ್ರಿಯೇ ಈ ಪ್ರದೇಶದಲ್ಲಿದ್ದ ಕಾರ್ಯಕರ್ತರನ್ನು ಕುದೂರು ಪೊಲೀಸರು ತೆರವುಗೊಳಿಸಿ, ಬಳಿಕ ಕಾರ್ಯಕರ್ತರಿಗಾಗಿ ತಯಾರಿಸಿದ್ದ ಈ ಊಟವನ್ನು ಪೊಲೀಸರೇ ಅಲ್ಲಿಂದ ಸಾಗಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

10 ಸಾವಿರ ಕಾರ್ಯಕರ್ತರಿಗಾಗಿ ತಯಾರಾಗಿದ್ದ ಈ ಊಟ ನಾಪತ್ತೆಯಾಗಿರುವುದು ಬಹಳಷ್ಟು ಕುತೂಹಲ ಕೆರಳಿಸಿದೆ.