ವಿಧಾನಸೌಧದ ಬಳಿ ಸಿಕ್ಕ ಕೋಟ್ಯಂತರ ರೂ. ಹಣ ಸಾಗಣೆಗೆ ಹೊಸ ಟ್ವಿಸ್ಟ್​​ ದೊರಕಿದ್ದು, ಎಲ್ಲಿಂದ ಈ ಹಣ ಬಂತು? ಯಾರಿಗೆ ತಲುಪಿಸಲು ಕೊಂಡೊಯ್ಯುತ್ತಿದ್ದ ಹಣ, ಈ ಎಲ್ಲ ಮಾಹಿತಿ ಮಾಜಿ ಸಿಎಂ ಯಡಿಯೂರಪ್ಪಗೆ ಗೊತ್ತಿದೆ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಹಾಸನ (ಅ.24): ವಿಧಾನಸೌಧದ ಬಳಿ ಸಿಕ್ಕ 1.91 ಕೋಟಿ ರೂ. ಹಣ ಯಾರದ್ದು ಎಂಬ ಪ್ರಶ್ನೆಗೆ ಉತ್ತರ ದೊರಕಿದ್ದು, ಹಣ ಯಾರದ್ದು ಅನ್ನುವುದು ಮಾಜಿ ಸಿಎಂ ಯಡಿಯೂರಪ್ಪಗೆ ಗೊತ್ತಂತೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್​​ ಸಿಡಿಸಿದ್ದಾರೆ. 

ವಿಧಾನಸೌಧದ ಬಳಿ ಸಿಕ್ಕ ಕೋಟ್ಯಂತರ ರೂ. ಹಣ ಸಾಗಣೆಗೆ ಹೊಸ ಟ್ವಿಸ್ಟ್​​ ದೊರಕಿದ್ದು, ಎಲ್ಲಿಂದ ಈ ಹಣ ಬಂತು? ಯಾರಿಗೆ ತಲುಪಿಸಲು ಕೊಂಡೊಯ್ಯುತ್ತಿದ್ದ ಹಣ, ಈ ಎಲ್ಲ ಮಾಹಿತಿ ಮಾಜಿ ಸಿಎಂ ಯಡಿಯೂರಪ್ಪಗೆ ಗೊತ್ತಿದೆ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಹಣದ ಬಗ್ಗೆ ಯಡಿಯೂರಪ್ಪ ಬಳಿ ಸ್ಪಷ್ಟ ಮಾಹಿತಿ ಇದೆ ಅನ್ನುವುದು ನನಗೆ ಗೊತ್ತಿದೆ, ಯಡಿಯೂರಪ್ಪ ಅವರನ್ನು ಕೇಳಿದರೆ ಸತ್ಯ ಹೇಳುತ್ತಾರೆ ಅನ್ನೋ ನಂಬಿಕೆ ಇದೆ. ಈ ಹಣದ ಬಗ್ಗೆ ಯಡಿಯೂರಪ್ಪ ಬಿಟ್ಟು ಬೇರೆ ಯಾರನ್ನೂ ಕೇಳುವ ಅಗತ್ಯವಿಲ್ಲ ಎಂದು ಹಾಸನದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.