Asianet Suvarna News Asianet Suvarna News

ಧರಂಸಿಂಗ್ ವಿಧಿವಶ ಹಿನ್ನೆಲೆ ಮೂರು ದಿನಗಳ ಕಾಲ ಶೋಕಾಚರಣೆ; ಶಾಲಾ ಕಾಲೇಜುಗಳಿಗೆ ರಜೆ

ಬೆಂಗಳೂರು ಕರ್ನಾಟಕದ ಮಾಜಿ ಸಿಎಂ ಧರಂ ಸಿಂಗ್ ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ.

Former CM Dharam Singh Passed Away

ಬೆಂಗಳೂರು(ಜೂ.27): ಕರ್ನಾಟಕದ ಮಾಜಿ ಸಿಎಂ ಧರಂ ಸಿಂಗ್ ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಬೆಂಗಳೂರಿನ ಎಂ. ಎಸ್ ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಧರಂ ಸಿಂಗ್ ಸಾವಿನ ದುಃಖದಲ್ಲಿ ಕರ್ನಾಟಕ ಸರ್ಕಾರ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ. ಅಲ್ಲದೇ  ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ. ಬೀದರ್, ಕಲಬುರಗಿ ಜಿಲ್ಲೆಯಲ್ಲಿ ನಾಳೆ ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

 

Follow Us:
Download App:
  • android
  • ios