ಕಾಂಗ್ರೆಸ್ ತೊರೆದ ನಾಯಕನಿಗೆ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ| ಸಚಿವರಾಗಿ ಹಿರಿಯ ನಾಯಕ ವಿಖೆ ಪಾಟೀಲ್ ಅಧಿಕಾರ ಸ್ವೀಕಾರ| ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಸಚಿವರಾದ ವಿಖೆ ಪಾಟೀಲ್| ಫಡ್ನವೀಸ್ ಸಂಪುಟ ವಿಸ್ತರಣೆ ಯಶಸ್ವಿ| 

ಮುಂಬೈ(ಜೂ.16): ಇತ್ತಿಚೀಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಹಿರಿಯ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್, ಮಹಾರಾಷ್ಟ್ರದ ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿಖೆ ಪಾಟೀಲ್ ಮತ್ತು ಮುಂಬೈ ಆಶೀಶ್ ಶೇಲರ್ ಸೇರಿದಂತೆ ಒಟ್ಸಟು 8 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆ ಸಿಎಂ ದೇವೇಂದ್ರ ಫಡ್ನವೀಸ್ ಉಪಸ್ಥಿತರಿದ್ದರು.

Scroll to load tweet…

ಮಹಾರಾಷ್ಟ್ರದ ಬಿಜೆಪಿ ಸರ್ಕಾರ ರಾಜ್ಯ ಸರ್ಕಾರದ ಸಂಪುಟ ಬದಲಾವಣೆ ಮತ್ತು ವಿಸ್ತರಣೆಗೆ ಮುಂದಾಗಿದ್ದು, ಈಗಾಗಲೇ ವಸತಿ ಸಚಿವ ಪ್ರಕಾಶ್ ಮೆಹ್ತಾ ಸೇರಿದಂತೆ 6 ಸಚಿವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.