ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನೇತೃತ್ವದ ತೀರ್ಪುಗಾರರ ಮಂಡಳಿ ಮನಮೋಹನ ಸಿಂಗ್ ಅವರನ್ನು ಅವಿರೋಧವಾಗಿ ಪ್ರಶಸ್ತಿಗೆ ಆಯ್ಕೆ ಮಾಡಿದೆ
ನವದೆಹಲಿ(ನ.20): ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು 2004ರಿಂದ 2014ರ ವರೆಗೆ ದೇಶದ ನಾಯಕತ್ವ ವಹಿಸಿದ್ದಕ್ಕಾಗಿ ಮತ್ತು ಭಾರತದ ಶ್ರೇಷ್ಠತೆಯನ್ನು ಜಾಗತಿಕವಾಗಿ ಹೆಚ್ಚಿಸಿದ್ದ ಕ್ಕಾಗಿ ಈ ವರ್ಷದ ಇಂದಿರಾ ಗಾಂಧಿ ಶಾಂತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನೇತೃತ್ವದ ತೀರ್ಪುಗಾರರ ಮಂಡಳಿ ಮನಮೋಹನ ಸಿಂಗ್ ಅವರನ್ನು ಅವಿರೋಧವಾಗಿ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಇಂದಿರಾ ಗಾಂಧಿ ಸ್ಮಾರಕ ಟ್ರಸ್ಟ್ ತಿಳಿಸಿದೆ.
