ಇವಿಎಂ ಕುರಿತಾಗಿ ವಿಪಕ್ಷಗಳು ಮಾಡುತ್ತಿರುವ ಆರೋಪದ ಬಗ್ಗೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರತಿಕ್ರಿಯೆ ನೀಡಿದ್ದಾರೆ.

ನವದೆಹಲಿ(ಮೇ.21): ಲೋಕಸಭೆ ಚುನಾವಣೆಯಲ್ಲಿ ಇವಿಎಂ ಮತಯಂತ್ರಗಳನ್ನು ತಿದ್ದುಪಡಿ ಮಾಡಿರುವ ಆರೋಪಕ್ಕೆ ಕುರಿತು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

Add Asianetnews Kannada as a Preferred SourcegooglePreferred

ಪ್ರಜಾಪ್ರಭುತ್ವದಲ್ಲಿ ಸವಾಲೊಡ್ಡುವ ಊಹಾಪೋಹಗಳಿಗೆ ಯಾವುದೇ ಸ್ಥಳವಿಲ್ಲ ಎಂದಿರುವ ಪ್ರಣಬ್, ಇವಿಎಂ ಮತಯಂತ್ರಗಳ ಕುರಿತು ಎದ್ದಿರುವ ಸಂದೇಹಗಳನ್ನು ಚುನಾವಣಾ ಆಯೋಗ ನಿವಾರಿಸಬೇಕು ಎಂದು ಮನವಿ ಮಾಡಿದ್ದಾರೆ.

ಇವಿಎಂ ಹೊತ್ತೊಯ್ದ 500 ಮುಸುಕುಧಾರಿಗಳು: ಆತಂಕದಲ್ಲಿ ಆಯೋಗ!

ಈ ಕುರಿತು ಹೇಳಿಕೆ ನೀಡಿರುವ ಪ್ರಣಬ್ ಮುಖರ್ಜಿ, ಮತದಾರರ ತೀರ್ಪನ್ನು ತಿರುಚುವ ಆರೋಪವನ್ನು ತಳ್ಳಿ ಹಾಕುವ ವರದಿ ಕುರಿತು ತಮಗೆ ಕಾಳಜಿ ಇದೆ ಎಂದು ತಿಳಿಸಿದ್ದಾರೆ. ಇವಿಎಂ ಮತಯಂತ್ರಗಳ ಸುರಕ್ಷತೆ ಚುನಾವಣಾ ಆಯೋಗದ ಜವಾಬ್ದಾರಿ ಎಂದಿರುವ ಅವರು, ಈ ಕುರಿತಾದ ಸಂದೇಹಗಳನ್ನು ಆದಷ್ಟು ಬೇಗ ನಿವಾರಿಸಬೇಕೆಂದು ಮನವಿ ಮಾಡಿದ್ದಾರೆ.

ಬೆಳಗ್ಗೆಯಷ್ಟೇ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗದ ಕಾರ್ಯವನ್ನು ಶ್ಲಾಘಿಸಿದ್ದ ಪ್ರಣಬ್ ಮುಖರ್ಜಿ, ಆಯೋಗದ ಕಾರ್ಯವನ್ನು ಅನುಮಾನದಿಂದ ನೋಡುವುದು ಉಚಿತವಲ್ಲ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.