ತಾಲೂಕಿನ ನಲ್ಲೂರು ಪಾಲಾ ಗ್ರಾಮದ ಬಳಿ ಅತೀ ವೇಗವಾಗಿ ಬಂದ ಟವೇರಾ ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಮೈಸೂರು(ಮಾ.25): ಹುಣುಸೂರು ಬಳಿ ಭೀಕರ ಅಪಘಾತವಾಗಿ ಬೆಂಗಳೂರಿನ ನಾಲ್ವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೃತಪಟ್ಟವರು ಬೆಂಗಳೂರಿನ ಹೊಸಕೆರೆಹಳ್ಳಿಯ ನಿವಾಸಿಗಳಾಗಿದ್ದಾರೆ. ತಾಲೂಕಿನ ನಲ್ಲೂರು ಪಾಲಾ ಗ್ರಾಮದ ಬಳಿ ಅತೀ ವೇಗವಾಗಿ ಬಂದ ಟವೇರಾ ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.