ಭಾರತೀಯ ಜನತಾ ಪಕ್ಷದ ನಾಯಕ ಸಾಕ್ಷಿ ಮಹಾರಾಜ್ ನೀಡಿರುವ ವಿವಾದಾತ್ಮಕ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದುಕೊಂಡಿದೆ. ಇವರ ಹೇಳಿಕೆ ಪಕ್ಷದ ನಿಲುವನ್ನು ಹೇಳುತ್ತಿಲ್ಲ, ಇದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಬಿಜೆಪಿ ಹೇಳಿದೆ.

ನವದೆಹಲಿ (ಜ.07): ಭಾರತೀಯ ಜನತಾ ಪಕ್ಷದ ನಾಯಕ ಸಾಕ್ಷಿ ಮಹಾರಾಜ್ ನೀಡಿರುವ ವಿವಾದಾತ್ಮಕ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದುಕೊಂಡಿದೆ. ಇವರ ಹೇಳಿಕೆ ಪಕ್ಷದ ನಿಲುವನ್ನು ಹೇಳುತ್ತಿಲ್ಲ, ಇದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಬಿಜೆಪಿ ಹೇಳಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚುನಾವಣಾ ‘ಪಂಚ’ ಜನ್ಯ ಮೊಳಗಿದ್ದು ಈ ಸಂದರ್ಬದಲ್ಲಿ ಸಾಕ್ಷಿ ಮಹಾರಾಜ್ ನೀಡಿರುವ ಹೇಳಿಕೆ ಭಾರತೀಯ ಜನತಾ ಪಕ್ಷಕ್ಕೆ ಇರುಸುಮುರುಸು ಉಂಟು ಮಾಡಿದೆ.

ಮಹಿಳೆ ಮಕ್ಕಳನ್ನು ಹೆರುವ ಯಂತ್ರವಲ್ಲ. ನಾಲ್ವರು ಪತ್ನಿಯರು, 40 ಮಕ್ಕಳು, 3 ವಿಚ್ಚೇದನ ಇವೆಲ್ಲಾ ಒಪ್ಪತಕ್ಕದ್ದಲ್ಲ. ಭಾರತದ ಜನಸಂಖ್ಯೆ ಹೆಚ್ಚಾಗಲು ಹಿಂದೂಗಳು ಕಾರಣವಲ್ಲ. ಹಿಂದೂಗಳ ಸಂಖ್ಯೆ ಕಡಿಮೆಯಾದರೆ ದೇಶ ಇಬ್ಭಾಗವಾಗುತ್ತದೆ ಎಂದು ಸಾಕ್ಷಿ ಮಹಾರಾಜ್ ಹೇಳಿದ್ದರು. ಈ ಹೇಳಿಕೆ ಒಂದು ಧರ್ಮದವರ ಕೆಂಗಣ್ಣಿಗೆ ಗುರಿಯಾಗಿದೆ.