ಉದ್ಯಾನನಗರಿ ನಾಗರಿಕರಿಗೆ ಕಡಿಮೆ ದರದಲ್ಲಿ ಊಟ- ತಿಂಡಿ ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಇಂದಿರಾ ಕ್ಯಾಂಟೀನ್’ ಯೋಜನೆ ಚಾಲನೆಗೆ ಕ್ಷಣಗಣನೆ ಶುರುವಾಗಿದ್ದು, ಕ್ಯಾಂಟೀನ್ ಉದ್ಘಾಟನೆಗೊಳ್ಳುವ ಆಗಸ್ಟ್ 16ರ ಮೊದಲ ದಿನ 101 ಕ್ಯಾಂಟೀನ್‌ಗಳಲ್ಲೂ ನಾಗರಿಕರಿಗೆ ಉಚಿತವಾಗಿ ಊಟ ವಿತರಣೆ ಮಾಡಲು ನಿರ್ಧರಿಸಲಾಗಿದೆ. ಅಲ್ಲದೇ, ನಗರದಲ್ಲಿನ 101 ಕ್ಯಾಂಟೀನ್‌ಗಳನ್ನು ಲೋಕಾರ್ಪಣೆ ಮಾಡಲಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್‌ಗಾಂಧಿ ಅವರು ಸಾಂಕೇತಿಕವಾಗಿ ಉದ್ಘಾಟನೆ ಮಾಡಲಿರುವ ಕನಕಪಾಳ್ಯ ಇಂದಿರಾ ಕ್ಯಾಂಟೀನ್‌ನಲ್ಲೇ ಊಟ ಮಾಡಲಿದ್ದಾರೆ.
ಬೆಂಗಳೂರು(ಆ.15): ಉದ್ಯಾನನಗರಿ ನಾಗರಿಕರಿಗೆ ಕಡಿಮೆ ದರದಲ್ಲಿ ಊಟ- ತಿಂಡಿ ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಇಂದಿರಾ ಕ್ಯಾಂಟೀನ್’ ಯೋಜನೆ ಚಾಲನೆಗೆ ಕ್ಷಣಗಣನೆ ಶುರುವಾಗಿದ್ದು, ಕ್ಯಾಂಟೀನ್ ಉದ್ಘಾಟನೆಗೊಳ್ಳುವ ಆಗಸ್ಟ್ 16ರ ಮೊದಲ ದಿನ 101 ಕ್ಯಾಂಟೀನ್ಗಳಲ್ಲೂ ನಾಗರಿಕರಿಗೆ ಉಚಿತವಾಗಿ ಊಟ ವಿತರಣೆ ಮಾಡಲು ನಿರ್ಧರಿಸಲಾಗಿದೆ. ಅಲ್ಲದೇ, ನಗರದಲ್ಲಿನ 101 ಕ್ಯಾಂಟೀನ್ಗಳನ್ನು ಲೋಕಾರ್ಪಣೆ ಮಾಡಲಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ಗಾಂಧಿ ಅವರು ಸಾಂಕೇತಿಕವಾಗಿ ಉದ್ಘಾಟನೆ ಮಾಡಲಿರುವ ಕನಕಪಾಳ್ಯ ಇಂದಿರಾ ಕ್ಯಾಂಟೀನ್ನಲ್ಲೇ ಊಟ ಮಾಡಲಿದ್ದಾರೆ.
ಚಿಕ್ಕಪೇಟೆ ಕ್ಷೇತ್ರದ ಕನಕನಪಾಳ್ಯದಲ್ಲಿ ಜಯನಗರ ವಾರ್ಡ್ ಕ್ಯಾಂಟೀನ್ ಉದ್ಘಾಟನೆ ಮಾಡಲಿರುವ ರಾಹುಲ್ಗಾಂಧಿ ಅವರು ಆಹಾರ ಸೇವಿಸುವ ಮೂಲಕ ಗುಣಮಟ್ಟ ಪರಿಶೀಲನೆ ನಡೆಸಲಿದ್ದಾರೆ. ಇದೇ ವೇಳೆ ಇಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವ 5 ಸಾವಿರ ಮಂದಿಗೆ ಉಚಿತವಾಗಿ ಊಟ ವಿತರಣೆ ಮಾಡಲು ಬಿಬಿಎಂಪಿ ಎಲ್ಲಾ ಸಿದ್ಧತೆ ಪೂರ್ಣಗೊಳಿಸಿದೆ. ಪ್ರತಿ ದಿನ ಬೆಳಗಿನ ಉಪಾಹಾರಕ್ಕೆ ರೂ. 5 ಹಾಗೂ ಮಧ್ಯಾಹ್ನ, ರಾತ್ರಿ ಊಟಕ್ಕೆ ಕೇವಲ ರೂ 10 ನಿಗದಿ ಮಾಡಲಾಗಿದೆ. ಆದರೆ, ಬುಧವಾರ ಉದ್ಘಾಟನೆಗೊಳ್ಳಲಿರುವ 101 ಕ್ಯಾಂಟೀನ್ಗಳಲ್ಲೂ ತಲಾ 500 ಮಂದಿಗೆ ರಾತ್ರಿಯ ಊಟವನ್ನು ಉಚಿತವಾಗಿ ವಿತರಿಸಲಾಗುತ್ತದೆ ಎಂದು ಬಿಬಿಎಂಪಿ ಮೂಲಗಳು ಖಚಿತಪಡಿಸಿವೆ.
ಆಗಸ್ಟ್ 15ರ ಸಂಜೆ ವೇಳೆಗೆ 101 ಕ್ಯಾಂಟೀನ್ ನಿರ್ಮಾಣ ಪೂರ್ಣಗೊಳಿಸಬೇಕಾದ ಒತ್ತಡದಲ್ಲಿರುವ ಬಿಬಿಎಂಪಿ ಆಯುಕ್ತರು ಭಾನುವಾರ ತಡರಾತ್ರಿ 3ರ ವರೆಗೂ ರಾತ್ರಿ ಇಡೀ ವಿವಿ‘ ಕ್ಯಾಂಟೀನ್ಗಳ ಪರಿಶೀಲನೆ ನಡೆಸಿದರು. ಬಿಬಿಎಂಪಿ ವ್ಯಾಪ್ತಿಯ 104 ಕಡೆಗಳಲ್ಲಿ ಕಾಮಗಾರಿ ನಡೆಯುತ್ತಿದ್ದು, 95ಕ್ಕೂ ಹೆಚ್ಚು ಕಡೆಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ. ಆಗಸ್ಟ್ 15೫ರ ಮಂಗಳವಾರ ಸಂಜೆ ವೇಳೆಗೆ 101 ಕ್ಯಾಂಟೀನ್ ಗಳೂ ಬಿಬಿಎಂಪಿಗೆ ಹಸ್ತಾಂತರವಾಗಲಿವೆ. ಬಳಿಕ ಬುಧವಾರ ಬೆಳಗ್ಗೆ ಊಟ ವಿತರಣೆಗೆ ಅಗತ್ಯ ಸಿದ್ಧತೆಗಳನ್ನು ಆಹಾರ ಪೂರೈಕೆ ಗುತ್ತಿಗೆ ಪಡೆದ ಸಂಸ್ಥೆಗಳು ಮಾಡಿಕೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಂಗೊಳಿಸಲು ಕ್ಯಾಂಟೀನ್ಗಳು ಸಜ್ಜು:
ಉದ್ಘಾಟನೆಗೊಳ್ಳಲಿರುವ ಕ್ಯಾಂಟೀನ್ಗಳನ್ನು ಹಾರ-ತೋರಣಗಳಿಂದ ಹಾಗೂ ವಿದ್ಯುತ್ ಅಲಂಕಾರದಿಂದ ಕಂಗೊಳಿಸುವಂತೆ ಮಾಡಲು ಪಾಲಿಕೆ ನಿ‘ರ್ರಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ ಕಾಮಗಾರಿ ಪೂರ್ಣಗೊಂಡಿರುವ ಕ್ಯಾಂಟೀನ್ಗಳ ಚಾಲನೆಗೆ ಅಗತ್ಯ ಸಿದ್ಧತೆ ನಡೆಸಿಕೊಳ್ಳುವಂತೆ ಪಾಲಿಕೆಯ ಆಯುಕ್ತರು ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆ ಹಿನ್ನೆಲೆಯಲ್ಲಿ ಆಗಸ್ಟ್ 16ರಂದು ಎಲ್ಲ ಇಂದಿರಾ ಕ್ಯಾಂಟೀನ್ಗಳು ಅಲಂಕಾರಿಕ ದೀಪಗಳಿಂದ ಮಿನುಗಲಿದ್ದು, ಹೂವಿನ ಅಲಂಕಾರದಿಂದ ಕಂಗೊಳಿಸಲಿವೆ. ಕೆಂಪೇಗೌಡ ದಿನಾಚರಣೆಯಂದ ಪಾಲಿಕೆ ಕೇಂದ್ರ ಕಚೇರಿಗೆ ಬರುವ ಕಳೆ ಎಲ್ಲಾ ಕ್ಯಾಂಟೀನ್ಗಳಿಗೆ ಬರಲಿದೆ.
ಟಾಪ್ 10 ಕ್ಯಾಂಟೀನ್ಗಳಿಗೆ ಪ್ರಶಸ್ತಿ:
ಸೆಲ್ಫಿ ವಿತ್ ಕ್ಯಾಂಟೀನ್ ಸ್ಪರ್ಧೆೆ ಮೂಲಕ ಕ್ಯಾಂಟೀನ್ ಜತೆ ಸೆಲ್ಫಿ ತೆಗೆಸಿಕೊಂಡು ಅತ್ಯುತ್ತಮ ಅಡಿ ಬರಹ ಬರೆದು ಕಳುಹಿಸುವ ವ್ಯಕ್ತಿಗೆ 1 ಲಕ್ಷ ಬಹುಮಾನ ಘೋಷಿಸಿರುವ ಬಿಬಿಎಂಪಿಯು ಕ್ಯಾಂಟೀನ್ಗಳಿಗೂ ಪ್ರಶಸ್ತಿ ನೀಡಲು ನಿರ್ಧರಿಸಿದೆ. ವಿವಿಧ ವಾರ್ಡ್ಗಳಲ್ಲಿ ನಿರ್ಮಿಸುತ್ತಿರುವ ಇಂದಿರಾ ಕ್ಯಾಂಟೀನ್ಗಳಲ್ಲಿ ಅತ್ಯುತ್ತಮವಾದ 10 ಕ್ಯಾಂಟೀನ್ಗಳಿಗೆ ಪ್ರಶಸ್ತಿ ನೀಡಲು ಪಾಲಿಕೆಯ ಹಿರಿಯ ಅಧಿಕಾರಿಗಳು ತೀರ್ಮಾನಿಸಿದ್ದಾರೆ.
ಕ್ಯಾಂಟೀನ್ ನಿರ್ಮಾಣಕ್ಕೆ ಸ್ಥಳ ಆಯ್ಕೆ, ಶೀಘ್ರ ಕಾಮಗಾರಿಗಳ ಪೂರ್ಣ, ಕ್ಯಾಂಟೀನ್ ಸೌಂದರ್ಯ ಹಾಗೂ ಜನರಿಗೆ ಉಪಯೋಗವಾಗುತ್ತಿದೆಯೇ ಎಂಬ ಅಂಶಗಳನ್ನು ಆಧರಿಸಿ 10 ಕ್ಯಾಂಟೀನ್ಗಳಿಗೆ ಪ್ರಶಸ್ತಿ ನೀಡಲಾಗುವುದು.
