ತಮಿಳುನಾಡಿನಲ್ಲಿ ಗಜ ಚಂಡಮಾರುತ ಅಪ್ಪಳಿಸಿದ್ದು ಇದರಿಂದ ಭಾರೀ ಪ್ರಮಾಣದಲ್ಲಿ ಅವಾಂತರ ಸೃಷ್ಟಿ ಮಾಡಿದೆ. ಇದರ ಎಫೆಕ್ಟ್ ಈಗ  ಉಡುಪಿ ಸೇರಿದಂತೆ ಕರಾವಳಿ ಪ್ರದೇಶಕ್ಕೆ ತಟ್ಟಿದೆ. ಇದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.  

ಉಡುಪಿ : ಗಜ ಚಂಡಮಾರುತದ ಪ್ರಭಾವದಿಂದ ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಗುಡುಗು ಸಿಡಿಲು ಸಹಿತ ವ್ಯಾಪಕ ಮಳೆಯಾಗುತ್ತಿದೆ. ಗಜ ಚಂಡಮಾರುತದ ಎಫೆಕ್ಟ್ ರಾಜ್ಯದ ಹಲವು ಪ್ರದೇಶಗಳಿಗೆ ತಟ್ಟಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

 ಉಡುಪಿ ಜಿಲ್ಲೆಯಲ್ಲಿ ಮೋಡ ಮುಸುಕಿದ ವಾತಾವರಣವಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. 

ತಮಿಳುನಾಡಿನಲ್ಲಿ ಭಾರೀ ಪ್ರಮಾಣದಲ್ಲಿ ಅನಾಹುತ ಸೃಷ್ಟಿ ಮಾಡಿದ್ದ ಗಜ ಚಂಡಮಾರುತದಿಂದ ಹಲವು ಪ್ರದೇಶಗಳಲ್ಲಿ ಮಳೆ ಸುರಿಯುತ್ತಿದೆ. ಅಲ್ಲದೇ ಮುಂದಿನ 2 ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.