Asianet Suvarna News Asianet Suvarna News

ಇಮ್ರಾನ್ ಎಸೆತಕ್ಕೆ ಗಂಭೀರ್ ರಾಜಕೀಯ ಸಿಕ್ಸರ್, ಕಾಂಗ್ರೆಸ್‌ಗೂ ಏಟು!

ಇಮ್ರಾನ್ ಖಾನ್ ಎಸೆತಕ್ಕೆ ಗೌತಮ್ ಗಂಭಿರ್ ಸಿಕ್ಸರ್/ ಮನಮೋನ್ ಸಿಂಗ್ ಅವರಿಗೆ ಆಹ್ವಾನ ಬಂದ ವಿಚಾರ/ ಒಂದೆ ಏಟಿನಲ್ಲಿ ಎರಡು ಹೊಡೆತ ನೀಡಿದ ಕ್ರಿಕೆಟಿಗ

Gambhir criticize Pak invite to Manmohan Singh for Kartarpur launch
Author
Bengaluru, First Published Oct 2, 2019, 12:05 AM IST

ನವದೆಹಲಿ[ಅ. 01]  ಕರ್ತಾರ್ ಪುರ ಕಾರಿಡಾರ್ ಉದ್ಘಾಟನೆಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪಾಕಿಸ್ತಾನ ಆಹ್ವಾನ ನೀಡಿದ ವಿಚಾರವನ್ನು ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಬೌಂಡರಿಯಿಂದ ಆಚೆ ಕಳಿಸಿದ್ದಾರೆ.

ಪಾಕಿಸ್ತಾನದ ಕರ್ತಾರ್‌ಪುರ ಕಾರಿಡಾರ್ ಉದ್ಘಾಟನೆಗಾಗಿ ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಆಹ್ವಾನವನ್ನು ನೀಡಲು ಪಾಕಿಸ್ತಾನ ನಿರ್ಧರಿಸಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಮಹಮೂದ್ ಖುರೇಷಿ ಹೇಳಿದ್ದರು.  ಆದರೆ ಈ ಆಹ್ವಾನವನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತಿರಸ್ಕರಿಸಿದ್ದಾರೆ ಎಂದು ವರದಿಯಾಗಿತ್ತು.

2007ರ ಟಿ 20 ವಿಶ್ವಕಪ್ ಗೆಲ್ಲಿಸಿಕೊಟ್ಟ ಹೀರೋಗಳು

ಇಮ್ರಾನ್ ಖಾನ್ ಚಾಣಾಕ್ಷ ನಡೆಗೆ ಅದಕ್ಕಿಂತಲೂ ಚಾಣಾಕ್ಷ ರೀತಿ ಉತ್ತರ ನೀಡಿರುವ ಗಂಭೀರ್,  ಇದೊಂದು ಪಕ್ಕಾ ರಾಜಕೀಯ ಹೆಜ್ಜೆ.. ಮನಮೋಹನ್ ಸಿಂಗ್ ಅವರನ್ನು ಕಳಿಸುವುದೋ, ಬಿಡುವುದೋ ಎಂಬ ನಿರ್ಧಾರವನ್ನು ಕಾಂಗ್ರೆಸ್ ಪಾರ್ಟಿ ಮಾಡಬೇಕಿದೆ ಎಂದಿದ್ದಾರೆ.

ಕಾಂಗ್ರೆಸ್ ನಾಯಕ ಒಂದು ಕಾಲದ ಕ್ರಿಕೆಟರ್ ನವಜೋತ್ ಸಿಂಗ್ ಸಿಧು ಪಾಕಿಸ್ತಾನಕ್ಕೆ ಹಿಂದೆ ಭೇಟಿ ನೀಡಿ ಅಲ್ಲಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲಿನ ಸೈನ್ಯದ ನಾಯಕನ ಅಪ್ಪಿಕೊಂಡಿದ್ದರು ಎಂಬುದನ್ನು ಉಲ್ಲೇಖ ಮಾಡಲು ಗಂಭೀರ್ ಮರೆತಿಲ್ಲ.

 

Follow Us:
Download App:
  • android
  • ios