ಗೋವಾ ಮುಖ್ಯಮಂತ್ರಿ ಕನ್ನಡಿಗರಿಗೆ ಶುಭ ಸುದ್ದಿಯೊಂದನ್ನು ನೀಡಿದ್ದಾರೆ. ಸಿಎಂ ಪ್ರಮೋದ್ ಸಾವಂತ್ ನೀಡಿದ ಆ ಗುಡ್ ನ್ಯೂಸ್ ಏನು..?

ಬೆಳಗಾವಿ [ಜೂ.15] : ಕಳೆದ 15 ವರ್ಷಗಳಿಂದ ಗೋವಾ ರಾಜ್ಯದ ಕನ್ನಡಿಗರನ್ನು ಸಂಘಟಿಸುವಲ್ಲಿ ಕರ್ನಾಟಕದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಪ್ರಮುಖ ಪಾತ್ರವಹಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗೋವಾದಲ್ಲಿ ಕನ್ನಡ ಭವನ ನಿರ್ಮಿಸುವುದಾದರೆ ಗೋವಾ ಸರ್ಕಾರದಿಂದ 2 ಎಕರೆ ಜಾಗ ನೀಡುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ ಹೇಳಿದರು. 

ಗೋವಾದ ಬಿಚ್ಚೋಲಿಯಲ್ಲಿ ಭಾನುವಾರ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅವರು ಈ ಭರವಸೆ ನೀಡಿದರು.