ಪೊಲೀಸರ ವೇಷದಲ್ಲಿ ಬಂದ ದರೋಡೆಕೋರರು ಚಿನ್ನಾಭರಣ ಉದ್ಯಮಿಯೊಬ್ಬರಿಂದ ಬರೋಬ್ಬರಿ 10 ಕೆ.ಜಿ. ಚಿನ್ನವನ್ನು ದೋಚಿ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ ಬಳಿ ನಡೆದಿದೆ.

ಗಾಜಿಯಾಬಾದ್ : ಈಗಿನ ಕಾಲದಲ್ಲಿ ಯಾರನ್ನೂ ನಂಬುವ ಹಾಗೇ ಇಲ್ಲ. ಏಕೆಂದರೆ ಪೊಲೀಸರ ವೇಷದಲ್ಲಿ ಬಂದ ದರೋಡೆಕೋರರು ಚಿನ್ನಾಭರಣ ಉದ್ಯಮಿಯೊಬ್ಬರಿಂದ ಬರೋಬ್ಬರಿ 10 ಕೆ.ಜಿ. ಚಿನ್ನವನ್ನು ದೋಚಿ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ ಬಳಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುಂಬೈನ ಯೂನಿಯನ್‌ ಜುವೆಲರ್ಸ್‌ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ರೋಹಿತ್‌ ಜೈನ್‌ ಎನ್ನುವವರು ವ್ಯಾಪಾರಕ್ಕೆಂದು ದೆಹಲಿಗೆ ಬಂದಿದ್ದರು. ಗ್ರಾಹಕರಿಗೆ ತೋರಿಸಲೆಂದು ಕಾರಿನಲ್ಲಿ ಚಿನ್ನಾಭರಣಗಳನ್ನು ಇಟ್ಟುಕೊಂಡಿದ್ದರು. ಈ ಸಂಗತಿ ತಿಳಿದ ಇಬ್ಬರು ದರೋಡೆಕೋರರು ಪೊಲೀಸರ ವೇಷದಲ್ಲಿ ಬಂದು ಕಾರನ್ನು ಅಡ್ಡಗಟ್ಟಿದ್ದಾರೆ.

ಪೊಲೀಸರು ಬಂದಿದ್ದಾರೆ ಎಂದು ಗಾಬರಿಯಿಂದ ಕಾರು ನಿಲ್ಲಿಸಿದಾಗ ದರೋಡೆಕೋರರು ಉದ್ಯಮಿಯ ಬಳಿಯಿದ್ದ 10 ಕೆ.ಜಿ. ಚಿನ್ನವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.