ಬೆಂಬಲ ಬೆಲೆ ನೀಡಿ ತೊಗರಿ ಬೇಳೆಯ ಖರೀದಿಗೆ ಹಾಕಲಾಗಿದ್ದ ಮಿತಿಯನ್ನು ಕೇಂದ್ರಸರ್ಕಾರ ವಿಸ್ತರಿಸಿದೆ.

ನವದೆಹಲಿ: ಬೆಂಬಲ ಬೆಲೆ ನೀಡಿ ತೊಗರಿ ಬೇಳೆಯ ಖರೀದಿಗೆ ಹಾಕಲಾಗಿದ್ದ ಮಿತಿಯನ್ನು ಕೇಂದ್ರಸರ್ಕಾರ ವಿಸ್ತರಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಕೃಷಿ ಭವನದಲ್ಲಿ ಕೃಷಿ ಸಚಿವ ರಾಧಾಮೋಹನ್ ಸಿಂಗ್ ಅವರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿದ್ದರು. ಅಷ್ಟೇ ಅಲ್ಲದೆ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಅವರು ಕೂಡ ಮನವಿ ಮಾಡಿಕೊಂಡಿದ್ದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಡಿ.12ರಂದು 90 ದಿನಗಳ ಕಾಲ 1,65,000 ಮೆಟ್ರಿಕ್ ಟನ್ ತೊಗರಿ ಖರೀದಿಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಅವಕಾಶ ಮಾಡಿಕೊಟ್ಟಿತ್ತು. ಬಳಿಕ ರಾಜ್ಯದ ಮನವಿಯ ಮೇರೆಗೆ ಮತ್ತೆ 2,65,200 ಮೆಟ್ರಿಕ್ ಟನ್ ತೊಗರಿ ಖರೀದಿಸಲು ಒಪ್ಪಿಗೆ ನೀಡಿತ್ತು. ಇದೀಗ ಮತ್ತೇ ಹೆಚ್ಚುವರಿಯಾಗಿ ಬೆಂಬಲ ಬೆಲೆ ನೀಡಿ ತೊಗರಿ ಖರೀದಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.

3,64,600ಮೆಟ್ರಿಕ್ ಟನ್ ತೊಗರಿ ಖರೀದಿಗೆ ಇದೀಗ ಕೇಂದ್ರ ಒಪ್ಪಿಕೊಂಡಂತಾಗಿದೆ. ರಾಜ್ಯದಲ್ಲಿ ವಿರಳಾತಿವಿರಳ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳುತ್ತಿ ದ್ದೇವೆ ಎಂದು ಸಚಿವ ರಾಧಾ ಮೋಹನ್ ಹೇಳಿದ್ದಾರೆ.