ಪ್ರಧಾನಿ ಮೊದಿ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಇದೀಗ ಶುಭ ಸುದ್ದಿಯೊಂದನ್ನು ನೀಡುತ್ತಿದೆ. ಸಂಘಟನಾ ವಲಯದ ಕಾರ್ಮಿಕರ ಪಿಂಚಣಿ ಮೊತ್ತವನ್ನು ದ್ವಿಗುಣ ಪ್ರಮಾಣದಲ್ಲಿ ಏರಿಕೆ ಮಾಡಲು ಚಿಂತನೆ ನಡೆಸಿದೆ.
ನವದೆಹಲಿ : ಸಂಘಟನಾ ವಲಯದ ಕಾರ್ಮಿಕರಿಗೆ ಇಲ್ಲಿದೆ ಒಂದು ಶುಭ ಸುದ್ದಿ. ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಈ ನೌಕರರ ಕನಿಷ್ಟ ಪಿಂಚಣಿಯ ಮೊತ್ತವನ್ನು ಏರಿಕೆ ಮಾಡಲು ಚಿಂತನೆ ನಡೆಸಿದೆ. ಅಲ್ಲದೇ ಪಿಂಚಣಿಯನ್ನು ದ್ವಿಗುಣ ಪ್ರಮಾಣದಲ್ಲಿ ಏರಿಕೆ ಮಾಡುವ ಸಾಧ್ಯತೆ ಇದೆ.
ಎಲ್ಲಾ ಸಂಘಟನಾ ವಲಯದ ನೌಕರರಿಗೂ ಕೂಡ ಈ ವಿಚಾರ ಅನ್ವಯವಾಗಲಿದ್ದು , ಒಂದು ವೇಳೆ ಜಾರಿಯಾದಲ್ಲಿ ಲಕ್ಷಾಂತರ ನೌಕರರು ಇದರ ಉಪಯೋಗವನ್ನು ಪಡೆದುಕೊಳ್ಳಲಿದ್ದಾರೆ.
ಮೂವರು ಸದಸ್ಯರನ್ನು ಒಳಗೊಂಡ ಸಮಿತಿಯೊಂದನ್ನು ಕಾರ್ಮಿಕ ಸಚಿವಾಲಯದಿಂದ ರಚಿಸಲಾಗಿದ್ದು, ಈ ಸಮಿತಿಯು ಸಂಘಟನಾ ವಲಯದ ಕಾರ್ಮಿಕರು ತಿಂಗಳಿಗೆ ಪಡೆಯುತ್ತಿರುವ ಪಿಂಚಣಿ ಮೊತ್ತ 1 ಸಾವಿರ ಅತ್ಯಂತ ಕಡಿಮೆ ಪ್ರಮಾಣದ್ದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದು, ಅವರ ಪಿಂಚಣಿ ಮೊತ್ತವನ್ನು ಏರಿಕೆ ಮಾಡುವುದು ಅತ್ಯಗತ್ಯ ಎಂದು ಹೇಳಿದೆ.
ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಂಘಟನಾ ವಲಯದ ನೌಕರರ ಪಿಂಚಣಿ ಮೊತ್ತವನ್ನು 2000ರು.ವರೆಗೂ ಕೂಡ ಏರಿಕೆ ಮಾಡುವ ಸಾಧ್ಯತೆ ಇದೆ. ಅಲ್ಲದೇ ಭವಿಷ್ಯದಲ್ಲಿ ಈ ಮೊತ್ತವು 5000 ವರೆಗೂ ಕೂಡ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೇಂದ್ರ ಸರ್ಕಾರವು ಈ ನಿಟ್ಟಿನಲ್ಲಿ ಅತ್ಯಂತ ಜವಾಬ್ದಾರಿಯುತವಾಗಿದ್ದು, ಇದರಿಂದ ಬಡ ಸಂಘಟನಾ ವಲಯದ ಕೆಲಸಗಾರರಿಗೆ ಹೆಚ್ಚಿನ ಪ್ರಮಾಣದಲ್ಲಿ ಲಾಭವುಂಟಾಗಲಿದೆ ಎಂದು ಸಮಿತಿಯ ಸದಸಸ್ಯರೋರ್ವರು ತಮ್ಮ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದಾರೆ.