ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ನಟಿಗೆ ಖುಲಾಸೆಗೊಳಿಸಿ ಕೋರ್ಟ್ ತೀರ್ಪು ನೀಡಿದೆ.
ರಾಯಚೂರು(ಡಿ.23): ನಟಿ ಪೂಜಾ ಗಾಂಧಿಗೆ ಕೋರ್ಟ್ ರಿಲೀಫ್ ನೀಡಿದೆ. ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಪ್ರಕರಣದಲ್ಲಿ ಪೂಜಾ ಗಾಂಧಿಗೆ 2ನೇ ಜೆಎಂಎಫ್ ಕೋರ್ಟ್ ಖುಲಾಸೆಗೊಳಿಸಿದೆ.
ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ನಟಿಗೆ ಖುಲಾಸೆಗೊಳಿಸಿ ಕೋರ್ಟ್ ತೀರ್ಪು ನೀಡಿದೆ. 2013ರ ಚುನಾವಣೆಯ ಸಂದರ್ಭದಲ್ಲಿ ಪೂಜಾ ಗಾಂಧಿ ಶ್ರೀರಾಮುಲ ಅವರ ಬಿಎಸ್'ಆರ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದರು. ಈ ಸಂದರರ್ಭದಲ್ಲಿ ಅನುಮತಿ ಇಲ್ಲದ ವಾಹನವನ್ನು ಚುನಾವಣಾ ಪ್ರಚಾರಕ್ಕೆ ಬಳಸಿದ ಕಾರಣ ಚುನಾವಣಾ ಆಯೋಗ ದೂರು ದಾಖಲಿಸಿತ್ತು.
