ಸರಕಾರಿ ನೌಕರರಿಂದ 100 ಕೋಟಿ ಪರಿಹಾರ?
- ಕೊಡಗಿಗೆ ಹರಿದು ಬರುತ್ತಿದೆ ನೆರವಿನ ಮಹಾಪೂರ
- ಕೊಡಗು ನೆರವಿಗೆ ಮುಂದಾದ ಸರ್ಕಾರಿ ನೌಕರರು
- ಒಂದು ದಿನದ ವೇತನ ನೀಡಲು ಸರ್ಕಾರಿ ನೌಕರರು ಸಿದ್ದ
ಕೊಪ್ಪಳ (ಆ. 20): ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಪರಿಹಾರ ಕೈಗೊಳ್ಳಲು ರಾಜ್ಯಾದ್ಯಂತ ನೆರವಿನ ಮಹಾಪೂರ ಹರಿದುಬರುತ್ತಿರುವ ಬೆನ್ನಲ್ಲೆ ಈಗ ರಾಜ್ಯ ಸರ್ಕಾರಿ ನೌಕರರು ₹ 100 ಕೋಟಿ ಪರಿಹಾರ ನೀಡಲು ನಿರ್ಧರಿಸಲು ಮುಂದಾಗಿದ್ದಾರೆ.
ರಾಜ್ಯಾದ್ಯಂತ ಸುಮಾರು 4.80 ಲಕ್ಷ ಸರ್ಕಾರಿ ನೌಕರರಿದ್ದು, ಇವರೆಲ್ಲರೂ ತಮ್ಮ ಒಂದು ದಿನದ ವೇತನ ಹಾಗೂ ಆಸಕ್ತರು ಹೆಚ್ಚಿನ ನೆರವು ನೀಡಲು ಮುಂದಾಗಿದ್ದಾರೆ. ರಾಜ್ಯ ಸರ್ಕಾರಿ ನೌಕರರ ವೇತನದ ಒಂದು ದಿನದ ಮೊತ್ತ ₹ 80 ರಿಂದ 90 ಕೋಟಿ ಆಗುತ್ತದೆ. ಇದಕ್ಕೆ ಕೆಲವರು ಸ್ವಯಂ ಪ್ರೇರಣೆಯಿಂದ ಹೆಚ್ಚಿನ ಮೊತ್ತ ನೀಡಲು ಉತ್ಸುಕರಾಗಿರುವುದರಿಂದ ₹ 100 ಕೋಟಿ ಸಂಗ್ರಹವಾಗಬಹುದು ಎಂದು ಅಂದಾಜಿಸಲಾಗಿದೆ.
ಸರ್ಕಾರಿ ನೌಕರರ ಸಂಘದ ಬೆಂಗಳೂರು ಭವನದಲ್ಲಿ ಇಂದು ಸಂಜೆ 5.30 ಕ್ಕೆ ತುರ್ತು ಸಭೆ ಕರೆಯಲಾಗಿದೆ.