ದಸರಾ ಉದ್ಘಾಟಿಸಲು ಸುಧಾಮೂರ್ತಿಗೆ ಬಂತು ಅಧಿಕೃತ ಆಹ್ವಾನ
ವಿಶ್ವ ಪ್ರಸಿದ್ಧ ಮೈಸೂರು ದಸರಾ ಉತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆಯಲ್ಲಿ ಭರ್ಜರಿ ಸಿದ್ಧತೆಗಳು ನಡೆದಿವೆ. ದಸರಾ ಉತ್ಸವದ ಉದ್ಘಾಟಕರಿಗೆ ರೆಡ್ ಕಾರ್ಪೆಟ್ ಸಿದ್ಧವಾಗಿದೆ.
ಬೆಂಗಳೂರು, [ಅ.03]: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಉದ್ಘಾಟನೆಗಾಗಿ ಇನ್ಫೋಸಿಸ್ ಸಂಸ್ಥೆಯ ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ.
ಇಂದು [ಬುಧವಾರ] ಮೈಸೂರು ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಹಾಗೂ ಮೈಸೂರಿನ ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಅವರು ಜಯನಗರದ ಇನ್ಫೋಸಿಸ್ ಫೌಂಡೇಶನ್ ಕಚೇರಿಗೆ ಆಗಮಿಸಿ ಆಮಂತ್ರಣ ನೀಡಿದ್ದಾರೆ.
"
ದಸರಾ ಉದ್ಘಾಟನೆಗೆ ಸುಧಾ ಮೂರ್ತಿ: ಅಪಸ್ವರ ಎತ್ತಿದ ಚಿಂತಕಿಗೆ ಟಾಂಗ್
ಈ ವೇಳೆ ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಸಾಥ್ ನೀಡಿದರು. ಸರಳ ಸಜ್ಜನಿಕೆಗೆ ಹೆಸರಾದ ಸುಧಾಮೂರ್ತಿ ಅವರು ಸಾಮಾಜಿಕ ಕಾರ್ಯಗಳಗಳಲ್ಲಿ ತೊಡಗಿಸಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.