ಇಂದು ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದ ಎಡಪ್ಪಾಡಿ ಪಳನಿಸ್ವಾಮಿ 124 ಶಾಸಕರ ಬೆಂಬಲದ ಪತ್ರವನ್ನು ನೀಡಿದ್ದಾರೆ.

ಚೆನ್ನೈ (ಫೆ.16): ಕಳೆದ 10 ದಿನಗಳಿಂದ ತಮಿಳುನಾಡಿನಲ್ಲಿ ನಡೆಯುತ್ತಿರುವ ರಾಜಕೀಯ ಹೈಡ್ರಾಮಾಗೆ ಕೊನೆಗೂ ತೆರೆ ಬಿದ್ದಿದೆ. ಬಹುಮತ ಸಾಬೀತುಪಡಿಸುವಂತೆ ಪಳನಿಸ್ವಾಮಿಗೆ ರಾಜ್ಯಪಾಲ ವಿದ್ಯಾಸಾಗರ್ ರಾವ್ ಆಹ್ವಾನಿಸುವ ಮೂಲಕ ಪನ್ನೀರ್ ಸೆಲ್ವಂ ಅವರ ಮುಖ್ಯಮಂತ್ರಿ ಕನಸು ಭಗ್ನಗೊಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಇಂದು ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದ ಎಡಪ್ಪಾಡಿ ಪಳನಿಸ್ವಾಮಿ 124 ಶಾಸಕರ ಬೆಂಬಲದ ಪತ್ರವನ್ನು ನೀಡಿದ್ದಾರೆ.

ರಾಜ್ಯಪಾಲರು ಪಳನಿಸ್ವಾಮಿಗೆ ಬಹಉಮತ ಸಾಬೀತುಪಡಿಸಲು 15 ದಿನಗಳ ಗಡುವು ನೀಡಿದ್ದಾರೆ. ವಿಧಾನಸಭೆಯಲ್ಲಿ ಬಹುಮತ ಸಾಬೀತಿಗೆ 118 ಶಾಸಕರ ಮತಗಳನ್ನು ಪಳನಿಸ್ವಾಮಿ ಪಡೆಯಬೇಕು

ಸಂಜೆ 4 ಗಂಟೆಗೆಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿರುವ ಪಳನಿಸ್ವಾಮಿ, ಬಳಿಕ ಜೈಲಿನಲ್ಲಿರುವ ಶಶಿಕಲಾ ಅವರನ್ನು ಭೇಟಿಯಾಗಲು ಬೆಂಗಳೂರಿಗೆ ತೆರಳಲಿದ್ದಾರೆ ಎನ್ನಲಾಗಿದೆ.

ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಪಳನಿಸ್ವಾಮಿ ಜತೆಗೆ ಜೊತೆ 31 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.