ರಾಷ್ಟ್ರೀಯ ಸುದ್ದಿವಾಹಿನಿಯೊಂದರಲ್ಲಿ ಬರುತ್ತಿರುವುದೆಲ್ಲ ಸುಳ್ಳು. ನಾನು ಹಿಂದೆ ನೀಡಿದ್ದ ಹೇಳಿಕೆಯನ್ನು ತಮಗೆ ಬೇಕಾದಂತೆ ಬದಲಾಯಿಸಿ ಕೊಂಡು ಮತ್ತೆ ತೋರಿಸುವ ಮೂಲಕ ನಾನು ಆದಾಯ ತೆರಿಗೆ ಇಲಾಖೆ ಮುಂದೆ ನೀಡಿದ್ದ ಹೇಳಿಕೆ ಗಳನ್ನು ರಾಜಕೀಯವಾಗಿ ದುರ್ಬಳಕೆ ಮಾಡುತ್ತಿದ್ದಾರೆ ಹಾಗೂ ನನ್ನ ತೇಜೋವಧೆಗೆ ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಶಾಸಕ ಕೆ. ಗೋವಿಂ ದರಾಜು ಆರೋಪಿಸಿದ್ದಾರೆ.
ಬೆಂಗಳೂರು(ಜೂ.23): ರಾಷ್ಟ್ರೀಯ ಸುದ್ದಿವಾಹಿನಿಯೊಂದರಲ್ಲಿ ಬರುತ್ತಿರುವುದೆಲ್ಲ ಸುಳ್ಳು. ನಾನು ಹಿಂದೆ ನೀಡಿದ್ದ ಹೇಳಿಕೆಯನ್ನು ತಮಗೆ ಬೇಕಾದಂತೆ ಬದಲಾಯಿಸಿ ಕೊಂಡು ಮತ್ತೆ ತೋರಿಸುವ ಮೂಲಕ ನಾನು ಆದಾಯ ತೆರಿಗೆ ಇಲಾಖೆ ಮುಂದೆ ನೀಡಿದ್ದ ಹೇಳಿಕೆ ಗಳನ್ನು ರಾಜಕೀಯವಾಗಿ ದುರ್ಬಳಕೆ ಮಾಡುತ್ತಿದ್ದಾರೆ ಹಾಗೂ ನನ್ನ ತೇಜೋವಧೆಗೆ ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಕೆ. ಗೋವಿಂ ದರಾಜು ಆರೋಪಿಸಿದ್ದಾರೆ.
ನಾನು ಹೇಳಿದ್ದನ್ನು ಪ್ರಸಾರ ಮಾಡುತ್ತಿಲ್ಲ
ಗೋವಿಂದರಾಜು ಹೇಳಿರುವುದು ಇಷ್ಟು: ರಾಷ್ಟ್ರೀಯ ಮಾಧ್ಯಮವು ನಾನು ಹೇಳಿದನ್ನು ಸಂಪೂರ್ಣವಾಗಿ ಬಿತ್ತರ ಮಾಡುತ್ತಿಲ್ಲ. 2016ರ ಮೇ 3ರಂದು ಇಲಾಖೆ ಅಧಿಕಾರಿಗಳಿಗೆ ನೀಡಿದ ಹೇಳಿಕೆಯನ್ನು ತಿರುಚಿ ವರದಿ ಮಾಡುತ್ತಿದ್ದಾರೆ. ನನ್ನ ಹೇಳಿಕೆ ಕುರಿತು ಚಾನೆಲ್ನವರು ಎಕೆಜಿ -3 ಅಂತ ತೋರಿಸುತ್ತಿದ್ದಾರೆ. ಆದರೆ, ನಾನು ಹೇಳಿಕೆ ನೀಡಿರುವುದು ಎಕೆಜಿ- 9. ಅಂದರೆ, ನಾನು ಎಕೆಜಿ-9ನಲ್ಲಿ ನೀಡಿದ ಹೇಳಿಕೆಯನ್ನು ತಿರುಚಿ ಎಕೆಜಿ-3ಗೆ ಲಿಂಕ್ ಮಾಡಿ ತೋರಿಸುತ್ತಿದ್ದಾರೆ. ತನ್ಮೂಲಕ ದೇಶವನ್ನು ತಪ್ಪು ದಾರಿಗೆಳೆಯು ತ್ತಿದ್ದಾರೆ. ವಿಚಾರಣೆ ವೇಳೆ ಪಕ್ಷದ ರಾಷ್ಟ್ರೀಯ ನಾಯಕರ ಹೆಸರನ್ನು ಉಲ್ಲೇಖಿಸಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳನ್ನು ನನಗೆ ಪ್ರಶ್ನೆಯನ್ನು ಕೇಳಿದ್ದರು. ಇದಕ್ಕೆ ನಾನು ನನ್ನ ಮನೆಯ ಮಲಗುವ ಕೋಣೆಯಲ್ಲಿ ದೊರಕಿದೆ ಎಂದು ನೀವು ಹೇಳುತ್ತಿರುವ ಡೈರಿಯು ನನ್ನದಲ್ಲ. ಹೀಗಾಗಿ ಆ ಡೈರಿಯನ್ನು ಆಧರಿಸಿ ನೀವು ಕೇಳುತ್ತಿರುವ ಪ್ರಶ್ನೆಯೇ ಆಧಾರ ರಹಿತ ಹಾಗೂ ಅಪ್ರಸ್ತುತ. ಅಲ್ಲದೆ, ನನಗೆ ಕೇಳುತ್ತಿರುವ ಪ್ರಶ್ನೆಯಲ್ಲಿ ನೀವು ಉಲ್ಲೇಖಿಸುತ್ತಿರುವ ಕೆಲ ಹೆಸರುಗಳು ನನ್ನ ಪಕ್ಷದ ಅತಿ ಉನ್ನತ ಹಾಗೂ ಗೌರವಾನ್ವಿತ ನಾಯಕರು. ಹೀಗಾಗಿ ನೀವು ಪ್ರಶ್ನೆಯಲ್ಲಿ ಇರುವ ನಾಯಕರ ಹೆಸರನ್ನು ಉಲ್ಲೇಖಿಸಿರುವುದನ್ನು ನಾನು ತೀವ್ರವಾಗಿ ವಿರೋಧಿಸುತ್ತೇನೆ ಹಾಗೂ ಖಂಡಿಸುತ್ತೇನೆ ಎಂದು ನಾನು ವಿಚಾರಣೆ ವೇಳೆ ಅಧಿಕಾರಿಗಳಿಗೆ ಹೇಳಿದ್ದೆ. ಆದರೆ, ಮಾಧ್ಯಮದವವರು ನನ್ನ ಪಕ್ಷದ ಗೌರವಾನ್ವಿತ ನಾಯಕರು ಎಂದು ಹೇಳಿದನ್ನು ಕಟ್ ಮಾಡಿ ಅಪೂರ್ಣ ಅಂಶಗಳನ್ನು ತೋರಿಸುವ ಮೂಲಕ ಎಲ್ಲರನ್ನು ದಾರಿ ತಪ್ಪಿಸುತ್ತಿದ್ದಾರೆ.
