Asianet Suvarna News Asianet Suvarna News

ಅಪನಗದೀಕರಣ ಬೆಂಬಲಿಸಿದ್ದ ಕೃಷ್ಣಮೂರ್ತಿ ಈಗ ಮುಖ್ಯ ಆರ್ಥಿಕ ಸಲಹೆಗಾರ!

ಇಂಡಿಯನ್‌ ಸ್ಕೂಲ್‌ ಆಫ್‌ ಬ್ಯುಸಿನೆಸ್‌ನಲ್ಲಿ ಹಣಕಾಸು ವಿಷಯದ ಸಹ ಪ್ರಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಕೃಷ್ಣಮೂರ್ತಿ ಸುಬ್ರಮಣಿಯನ್‌ ಅವರನ್ನು ಮುಖ್ಯ ಆರ್ಥಿಕ ಸಲಹೆಗಾರರನ್ನಾಗಿ ಕೇಂದ್ರ ಸರ್ಕಾರ ನೇಮಿಸಿದೆ.

Govt appoints Krishnamurthy Subramanian as Chief Economic Adviser for 3 years
Author
New Delhi, First Published Dec 8, 2018, 8:19 AM IST

ನವದೆಹಲಿ[ಡಿ.08]: ಇಂಡಿಯನ್‌ ಸ್ಕೂಲ್‌ ಆಫ್‌ ಬ್ಯುಸಿನೆಸ್‌- ಹೈದರಾಬಾದ್‌ನ ಪ್ರಾಧ್ಯಾಪಕ ಕೃಷ್ಣಮೂರ್ತಿ ಸುಬ್ರಮಣಿಯನ್‌ ಅವರನ್ನು ಮುಖ್ಯ ಆರ್ಥಿಕ ಸಲಹೆಗಾರರನ್ನಾಗಿ ಕೇಂದ್ರ ಸರ್ಕಾರ ಶುಕ್ರವಾರ ನೇಮಿಸಿದೆ.

ಅರವಿಂದ ಸುಬ್ರಮಣಿಯನ್‌ ಅವರ ರಾಜೀನಾಮೆಯಿಂದ ಈ ಹುದ್ದೆ ತೆರವಾಗಿತ್ತು. ಸಂಪುಟದ ನೇಮಕಾತಿ ಸಮಿತಿ ಮುಖ್ಯ ಆರ್ಥಿಕ ಸಲಹೆಗಾರ ಹುದ್ದೆಗೆ ಕೃಷ್ಣಮೂರ್ತಿ ಸುಬ್ರಮಣಿಯನ್‌ ಅವರನ್ನು ನೇಮಿಸಿದ್ದು, ಮೂರು ವರ್ಷಗಳ ಕಾಲ ಅವರು ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಮೂಲತಃ ತಮಿಳುನಾಡಿನವರಾದ ಸುಬ್ರಮಣಿಯನ್‌ ಅವರು ಸದ್ಯ ಇಂಡಿಯನ್‌ ಸ್ಕೂಲ್‌ ಆಫ್‌ ಬ್ಯುಸಿನೆಸ್‌ನಲ್ಲಿ ಹಣಕಾಸು ವಿಷಯದ ಸಹ ಪ್ರಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: ಮೋದಿಗೆ ಹೊಸ ಸಲಹೆಗಾರ: ಆಗ್ತಾರಾ ಆರ್ಥಿಕತೆಯ ಹರಿಕಾರ?

ಶಿಕಾಗೋ ಬೂತ್‌ ಸ್ಕೂಲ್‌ ಆಫ್‌ ಬ್ಯುಸಿನೆಸ್‌ನಲ್ಲಿ ಸುಬ್ರಮಣಿಯನ್‌ ಅವರು ಪಿಎಚ್‌ಡಿ ಪೂರೈಸಿದ್ದಾರೆ. ಐಐಟಿ- ಐಐಎಂನ ಅಗ್ರ ಶ್ರೇಯಾಂಕಿತ ಹಳೆಯ ವಿದ್ಯಾರ್ಥಿಯಾಗಿರುವ ಸುಬ್ರಮಣಿಯನ್‌ ಅವರು ಬ್ಯಾಂಕಿಂಗ್‌, ಕಾರ್ಪೊರೇಟ್‌ ಆಡಳಿತದಲ್ಲಿ ಪರಿಣತಿ ಹೊಂದಿದ್ದಾರೆ.

Follow Us:
Download App:
  • android
  • ios