ಅ.28ರಂದು ಪೂರ್ವಭಾವಿ ಸಭೆ ನಡೆಯಲಿದೆ. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಂದ ಆಹ್ವಾನ ನೀಡಲಾಗಿದೆ.

ಬೆಂಗಳೂರು(ಅ.26): ಬಿಜೆಪಿ ಪ್ರಬಲ ವಿರೋಧದ ನಡುವೆಯೂ ನವೆಂಬರ್​ 10ರಂದು ಹಜರತ್ ಟಿಪ್ಪು ಜಯಂತಿ ಆಚರಣೆಗೆ ಸರ್ಕಾರ ಆದೇಶ ನೀಡಿದೆ. ನವೆಂಬರ್​ 10ರಂದು ಬೆಳಗ್ಗೆ 11ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್​ ಹಾಲ್​ನಲ್ಲಿ ಟಿಪ್ಪು ಜಯಂತಿ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆದೇಶ ಪ್ರಕಟವಾಗಿದೆ. ಕಾರ್ಯಕ್ರಮದ ರೂಪುರೇಷಗಳ ಸಿದ್ದಪಡಿಸುವುದಕ್ಕಾಗಿ ಅ.28ರಂದು ಪೂರ್ವಭಾವಿ ಸಭೆ ನಡೆಯಲಿದೆ. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಂದ ಆಹ್ವಾನ ನೀಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred